August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗಂಡಿಬಾಗಿಲು ಸಿಯೋನ್ ಆಶ್ರಮದ 27ನೇ ವಾರ್ಷಿಕೋತ್ಸವ – ಸೇವಾ ಕಾರ್ಯಕ್ಕೆ ಗಣ್ಯರ ಶ್ಲಾಘನೆ

ಗಂಡಿಬಾಗಿಲು ಇಲ್ಲಿನ ಪ್ರಸಿದ್ಧ ಸಮಾಜ ಸೇವಾ ಸಂಸ್ಥೆಯಾದ ಸಿಯೋನ್ ಆಶ್ರಮ ಟ್ರಸ್ಟ್ (ರಿ.) ತನ್ನ 27ನೇ ವರ್ಷದ ಸಂಭ್ರಮವನ್ನು ಸಡಗರದಿಂದ ಆಚರಿಸಿತು. ಮಾರ್ಚ್ 22ರಂದು ಭಾನುವಾರ ನಡೆದ ಈ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಆಶ್ರಮದ ನಿಸ್ವಾರ್ಥ ಸೇವೆಯನ್ನು ಗಣ್ಯರು ಮುಕ್ತಕಂಠದಿಂದ ಪ್ರಶಂಸಿಸಿದರು.

ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ. ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರಕಾಶ್ ಪ್ರಭು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆಶ್ರಮದ ಕುರಿತು ತಾವು ರಚಿಸಿದ ಸ್ವರಚಿತ ಕವನವನ್ನು ಹಾಡುವ ಮೂಲಕ ಅವರು ಎಲ್ಲರ ಗಮನ ಸೆಳೆದರಲ್ಲದೆ, ಆಶ್ರಮದ ಮಾನವೀಯ ಕಾರ್ಯಗಳು ಮಾದರಿಯಾಗಿವೆ ಎಂದರು.

ಸಂಸ್ಥೆಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿ ಆಶ್ರಮವು ಬೆಳೆದು ಬಂದ ಹಾದಿ ಹಾಗೂ ಸದ್ಯದ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ನೀಡಿದರು. ಲೆಕ್ಕಾಧಿಕಾರಿ ಸೌಮ್ಯ ಯು.ಪಿ. ವಾರ್ಷಿಕ ವರದಿ ಮಂಡಿಸಿದರು.

ವಿಶೇಷತೆಗಳು:

* ಆಶ್ರಮದ ನಿವಾಸಿಗಳು ಮತ್ತು ಸಿಬ್ಬಂದಿಗಾಗಿ ಆಯೋಜಿಸಿದ್ದ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

* ಕಾರ್ಯಕ್ರಮದಲ್ಲಿ ಆಶ್ರಮದ ಹಿತೈಷಿಗಳು, ವೈದ್ಯಾಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

* ಆಡಳಿತಾಧಿಕಾರಿ ಶೋಭಾ ಯು.ಪಿ. ಸ್ವಾಗತಿಸಿ, ಆಶಾಸುಧಾಕರ್ ವಂದಿಸಿದರು. ದಿನಾವತಿಯವರು ಕಾರ್ಯಕ್ರಮ ನಿರೂಪಿಸಿದರು.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page