August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾರ್ಚ್ 31 ರಿಂದ ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ನಡ್ವಾಲ್ ಸಿರಿ ಜಾತ್ರೆ

ತುಳುನಾಡಿನ ಪವಿತ್ರ ಆಲಡೆ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದ ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಈ ವರ್ಷದ ವಾರ್ಷಿಕ ನಡ್ವಾಲ್ ಸಿರಿ ಜಾತ್ರೆಯು ಮಾರ್ಚ್ 31 ರಿಂದ ಏಪ್ರಿಲ್ 4ರವರೆಗೆ ಬಹಳ ವಿಜೃಂಭಣೆಯಿಂದ ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ಕೆ. ಎಂ. ನಾಗೇಶ್ ಕುಮಾರ್ ಅವರು ತಿಳಿಸಿದರು.

ಮಾರ್ಚ್ 24 ರಂದು ಬೆಳ್ತಂಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಗ್ಗಿ ಹುಣ್ಣಿಮೆಯ ವಿಶೇಷ ಸಂದರ್ಭದಲ್ಲಿ ನಡೆಯುವ ಈ ಜಾತ್ರೋತ್ಸವಕ್ಕೆ ನಾಡಿನಾದ್ಯಂತ ಸಾವಿರಾರು ಭಕ್ತರು ಆಗಮಿಸಲಿದ್ದಾರೆ ಎಂದರು.

ಧಾರ್ಮಿಕ ಕಾರ್ಯಕ್ರಮಗಳ ವಿವರ:

ನೇತ್ರಾವತಿ ನದಿಯ ದಡದಲ್ಲಿರುವ ಈ ಪುಣ್ಯಕ್ಷೇತ್ರದಲ್ಲಿ ಜಾತ್ರೆಯ ಅಂಗವಾಗಿ ವೈವಿಧ್ಯಮಯ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ:

* ಮಾರ್ಚ್ 31: ಬೆಳಿಗ್ಗೆಯಿಂದ ದೇವತಾ ಕಾರ್ಯಗಳು ಹಾಗೂ ರಾತ್ರಿ ದೈವಗಳ ನೇಮೋತ್ಸವ.

* ಏಪ್ರಿಲ್ 1: ಬೆಳಿಗ್ಗೆ ಶ್ರೀ ದೇವರ ಉತ್ಸವ ಮತ್ತು ಭಜನಾ ಸಂಕೀರ್ತನೆ. ರಾತ್ರಿ ಅಬ್ಬಕ್ಕ-ದಾರಗರ ಚೆನ್ನೆಮಣೆ ಆಟ ಹಾಗೂ ಕ್ಷೇತ್ರದ ಪ್ರಧಾನ ದೈವ ಸೇಮಕಲ್ಲ ಪಂಜುರ್ಲಿಗೆ ನೇಮೋತ್ಸವ.

* ಏಪ್ರಿಲ್ 2: ಬೆಳಿಗ್ಗೆ ನಾಗದರ್ಶನ ಸೇವೆ ಮತ್ತು ದೇವರ ಉತ್ಸವ. ರಾತ್ರಿ 7 ಗಂಟೆಯಿಂದ ಪ್ರಸಿದ್ಧ ‘ವಾರ್ಷಿಕ ನಡ್ವಾಲ್ ಸಿರಿ ಜಾತ್ರೆ’ ಆರಂಭವಾಗಲಿದ್ದು, ರಾತ್ರಿ 8ಕ್ಕೆ ಧಾರ್ಮಿಕ ಸಭೆ ಹಾಗೂ ರಾತ್ರಿ 10ಕ್ಕೆ ‘ರಾಘು ಮಾಸ್ಟ್ರು’ ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಕ್ಷೇತ್ರದ ವಿಶೇಷತೆ:

ಈ ಕ್ಷೇತ್ರದಲ್ಲಿ ಸ್ವಯಂಭೂ ಲಿಂಗ ಶ್ರೀ ಲೋಕನಾಥೇಶ್ವರ (ಬೆರ್ಮರು) ಪ್ರಧಾನ ದೇವರಾಗಿದ್ದು, ಎಡಭಾಗದಲ್ಲಿ ಸತ್ಯದ ಸಿರಿ ಹಾಗೂ ಬಲಭಾಗದಲ್ಲಿ ಕುಮಾರ (ಸುಬ್ರಹ್ಮಣ್ಯ) ಮತ್ತು ಗಣಪತಿ, ದುರ್ಗಾದೇವಿಯ ಸನ್ನಿಧಿಗಳಿವೆ. ಭಕ್ತರು ಹರಕೆಯ ರೂಪದಲ್ಲಿ ಹುರುಳಿ, ಅಕ್ಕಿ, ತೆಂಗಿನಕಾಯಿ, ಹಿಂಗಾರ ಮತ್ತು ಪುಂಡಿ ಪಣವನ್ನು ಅರ್ಪಿಸುವುದು ಇಲ್ಲಿನ ವಿಶೇಷ ಪದ್ಧತಿಯಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ, ಸದಸ್ಯರಾದ ಪ್ರಸಾದ್ ಕುಮಾರ್ ಏಣಿಂಜೆ ಮತ್ತು ಸಂತೋಷ್ ಗೌಡ ಉಪಸ್ಥಿತರಿದ್ದರು.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page