August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿಡುವಾಳೆಗೆ ಹೆಮ್ಮೆಯ ತಂದ ‘ಚಿನ್ನದ ಹುಡುಗಿ’ – ಬಿ.ಟೆಕ್‌ನಲ್ಲಿ ರಿಷಲ್ ತಾವ್ರೊಗೆ ಪ್ರಥಮ ರ್‍ಯಾಂಕ್!

ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಕುಮಾರಿ ರಿಷಲ್ ತಾವ್ರೊ, ಬಿ.ಟೆಕ್ ಪದವಿಯಲ್ಲಿ ಅತ್ಯುನ್ನತ ಸಾಧನೆಗೈದು ಪ್ರಥಮ ರ್‍ಯಾಂಕ್‌ನೊಂದಿಗೆ ಚಿಹ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ರಿಷಲ್, ಇತ್ತೀಚೆಗೆ ನಡೆದ ಕಾಲೇಜಿನ ಘಟಿಕೋತ್ಸವದಲ್ಲಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಶೈಕ್ಷಣಿಕ ಜೀವನದ ಉದ್ದಕ್ಕೂ ಶಿಸ್ತು ಮತ್ತು ಪರಿಶ್ರಮವನ್ನು ಮೈಗೂಡಿಸಿಕೊಂಡಿದ್ದ ಇವರು, ಇದೀಗ ಇಡೀ ಜಿಲ್ಲೆ ಮೆಚ್ಚುವಂತಹ ಸಾಧನೆ ಮಾಡುವ ಮೂಲಕ ನಿಡುವಾಳೆ ಗ್ರಾಮದ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ಪಸರಿಸಿದ್ದಾರೆ.

ಸಾಧನೆಯ ಹಿಂದೆ ಪೋಷಕರ ಬೆಂಬಲ:

ರಿಷಲ್ ತಾವ್ರೊ ಅವರು ನಿಡುವಾಳೆ ಜೆ.ಎಂ.ಜೆ. ಫ್ಯಾನ್ಸಿ ಸ್ಟೋರ್ಸ್ ಮಾಲೀಕರಾದ ಜೋಸೆಫ್ ಹಾಗೂ ರೋಸ್ಲಿನ್ ತಾವ್ರೊ ದಂಪತಿಯ ಪುತ್ರಿ. ಸಾಧಾರಣ ಕುಟುಂಬದ ಹಿನ್ನೆಲೆಯಿಂದ ಬಂದಿದ್ದರೂ, ಶಿಕ್ಷಣದಲ್ಲಿ ಅಪ್ರತಿಮ ಆಸಕ್ತಿ ಹೊಂದಿದ್ದ ರಿಷಲ್ ಅವರ ಈ ಗೆಲುವು ಇಂದು ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.

ಮಗಳ ಈ ಅಮೋಘ ಸಾಧನೆಯಿಂದಾಗಿ ಪೋಷಕರು ಮತ್ತು ಗ್ರಾಮಸ್ಥರು ಸಂಭ್ರಮ ವ್ಯಕ್ತಪಡಿಸಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ರಿಷಲ್ ಅವರ ಸಾಧನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

“ಪರಿಶ್ರಮಕ್ಕೆ ಸಿಕ್ಕ ಫಲವಿದು. ನಮ್ಮ ಮಗಳ ಸಾಧನೆ ನಮ್ಮೂರಿನ ಹೆಮ್ಮೆ” ಎಂದು ನಿಡುವಾಳೆ ಗ್ರಾಮಸ್ಥರು ಹೇಳಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page