April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MLC ಐವನ್ ಡಿಸೋಜ ಶಿಫಾರಸು – 8 ಜನ ಫಲಾನುಭವಿಗಳಿಗೆ 4.15 ಲಕ್ಷ ರೂಪಾಯಿ ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆ

ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಅವರ ವಿಶೇಷ ಶಿಫಾರಸಿನ ಮೇರೆಗೆ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 8 ಮಂದಿ ಅರ್ಹ ಅರ್ಜಿದಾರರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 4,15,502 ರೂಪಾಯಿ ಪರಿಹಾರ ಧನ ಮಂಜೂರಾಗಿದ್ದು, ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ.

ಮಂಗಳೂರಿನಲ್ಲಿರುವ ವಿಧಾನ ಪರಿಷತ್ ಸದಸ್ಯರ ಕಚೇರಿಯಲ್ಲಿ ಪರಿಹಾರ ಧನದ ಬಿಡುಗಡೆ ಪತ್ರವನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಸಹಾಯಧನ ಪಡೆದ ವಿವರಗಳು ಈ ಕೆಳಗಿನಂತಿವೆ:

 

ಫಲಾನುಭವಿಗಳ ವಿವರ:

* ಅರುಣಾ ಐ., ಸುರತ್ಕಲ್: 95,290 ರೂಪಾಯಿ

* ನಬಿಸಾ, ಸುಳ್ಯ: 79,747 ರೂಪಾಯಿ

* ಕುಮಾರಿ ಪಾಯಲ್ ಸುವರ್ಣ, ಕುಲಶೇಖರ: 62,788 ರೂಪಾಯಿ

* ಅಬ್ದುಲ್ ಖಾದರ್, ಮಂಗಳೂರು: 59,066 ರೂಪಾಯಿ

* ಪುಷ್ಪಲತಾ, ಕುದ್ರೋಳಿ: 31,893 ರೂಪಾಯಿ

* ಹೈದರ್ ಅಬ್ದುಲ್ ರೆಹಮಾನ್: 32,835 ರೂಪಾಯಿ

* ರಂಜಿತ್ ಜಿ.: 25,000 ರೂಪಾಯಿ

* ಹಮೀದ್, ಮಂಗಳೂರು: 22,685 ರೂಪಾಯಿ

* ಮಾಲತಿ ಕುಂದರ್, ಮಂಗಳೂರು: 6,193 ರೂಪಾಯಿ

ಅನಾರೋಗ್ಯದಿಂದ ಸಂಕಷ್ಟಕ್ಕೀಡಾದ ಬಡ ಕುಟುಂಬಗಳಿಗೆ ಈ ಪರಿಹಾರ ಧನವು ಚಿಕಿತ್ಸಾ ವೆಚ್ಚ ಭರಿಸಲು ಆಸರೆಯಾಗಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page