April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಯುಸಿ ಫಲಿತಾಂಶ – ನೇರಳಕಟ್ಟೆಯ ಆಯಿಷಾ ಹೈಫಾ ಮತ್ತು ಮಹಮ್ಮದ್ ಶಫೀರ್‌ ವಿಶಿಷ್ಟ ಶ್ರೇಣಿಯ ಸಾಧನೆ

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಕುಕ್ಕೆರಬೆಟ್ಟಿನ ಇಬ್ಬರು ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ (Distinction) ತೇರ್ಗಡೆಯಾಗಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.

ಆಯಿಷಾ ಹೈಫಾ ಸಾಧನೆ:

ನೇರಳಕಟ್ಟೆ ಕುಕ್ಕೆರಬೆಟ್ಟು ನಿವಾಸಿಗಳಾದ ಮಹಮ್ಮದ್ ಮತ್ತು ಬುಶ್ರಾ ದಂಪತಿಯ ಪುತ್ರಿ ಆಯಿಷಾ ಹೈಫಾ ಒಟ್ಟು 600 ಅಂಕಗಳಿಗೆ 560 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಇವರು ಕಲ್ಲಡ್ಕದ ಅನುಗ್ರಹ ವುಮೆನ್ಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.

ಮಹಮ್ಮದ್ ಶಫೀರ್ ಸಾಧನೆ:

ನೇರಳಕಟ್ಟೆ ಕುಕ್ಕೆರಬೆಟ್ಟು ನಿವಾಸಿಗಳಾದ ಕೆ.ಬಿ.ಸಲೀಂ ಹಾಜಿ ಹಾಗೂ ಸೌದಾ ದಂಪತಿಗಳ ಪುತ್ರ ಮಹಮ್ಮದ್ ಶಫೀರ್ ಒಟ್ಟು 600 ಅಂಕಗಳಿಗೆ 544 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುತ್ತೂರಿನ ಸುಧಾನಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.

ಗ್ರಾಮದ ಈ ಇಬ್ಬರು ಪ್ರತಿಭೆಗಳ ಶೈಕ್ಷಣಿಕ ಸಾಧನೆಗೆ ನೇರಳಕಟ್ಟೆ ಹಾಗೂ ಕುಕ್ಕೆರಬೆಟ್ಟು ಗ್ರಾಮಸ್ಥರು, ಶಿಕ್ಷಕರು ಮತ್ತು ಹಿತೈಷಿಗಳು ಹರ್ಷ ವ್ಯಕ್ತಪಡಿಸಿ, ಶುಭಾಶಯಗಳನ್ನು ಕೋರಿದ್ದಾರೆ.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page