August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಾಕ್ಸನ್ ಫುರ್ಟಾಡೊ ಅಬ್ಬರ – ರೊಸಾರಿಯೊ ಪ್ರೀಮಿಯರ್ ಲೀಗ್‌ನಲ್ಲಿ ಸೂಪರ್ ಕಿಂಗ್ಸ್ ತಂಡಕ್ಕೆ ಭರ್ಜರಿ ಜಯ

ರೊಸಾರಿಯೊ ಶಾಲಾ ಮೈದಾನದಲ್ಲಿ ಏಪ್ರಿಲ್ 19ರಂದು ಭಾನುವಾರ ನಡೆದ ರೊಸಾರಿಯೊ ಪ್ರೀಮಿಯರ್ ಲೀಗ್ (RPL) – ಸೀಸನ್ 2ರ ರೋಚಕ ಫೈನಲ್ ಪಂದ್ಯದಲ್ಲಿ ಗ್ಲೋರಿ ಹಂಟರ್ಸ್ ತಂಡವನ್ನು ಮಣಿಸಿದ ರೊಸಾರಿಯೊ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

ಅಜೇಯ ಓಟ ಮತ್ತು ಗೆಲುವು:

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅದ್ಭುತ ಶಿಸ್ತು ಪ್ರದರ್ಶಿಸಿದ ರೊಸಾರಿಯೊ ಸೂಪರ್ ಕಿಂಗ್ಸ್ ತಂಡವು ಇಡೀ ಪಂದ್ಯಾವಳಿಯಲ್ಲಿ ಅಜೇಯವಾಗಿ ಉಳಿದು ಟ್ರೋಫಿಯನ್ನು ಎತ್ತಿಹಿಡಿಯಿತು. ವಿಜೇತ ತಂಡಕ್ಕೆ 25,000 ರೂಪಾಯಿ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಯಿತು. ದ್ವಿತೀಯ ಸ್ಥಾನ ಪಡೆದ ಗ್ಲೋರಿ ಹಂಟರ್ಸ್ ತಂಡವು 10,000 ರೂಪಾಯಿ ನಗದು ಮತ್ತು ರನ್ನರ್ ಅಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ವೈಯಕ್ತಿಕ ಸಾಧನೆಗಳು:

ರೊಸಾರಿಯೊ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಜಾಕ್ಸನ್ ಫುರ್ಟಾಡೊ ಅವರು ಫೈನಲ್ ಪಂದ್ಯದ ಶ್ರೇಷ್ಠ ಆಟಗಾರ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿಕೊಂಡರು. ರೊಸಾರಿಯೊ ಟೈಟಾನ್ಸ್‌ನ ಲ್ಯಾನ್ವಿನ್ ಮೊಂತೇರೊ ಸರಣಿಯ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿ ಹಾಗೂ ಗ್ಲೋರಿ ಹಂಟರ್ಸ್ ತಂಡದ ಸೆಬಾಸ್ಟಿಯನ್ ಅತ್ಯುತ್ತಮ ಬೌಲರ್ ಆಗಿ ಹೊರಹೊಮ್ಮಿದರು.

ಉದ್ಘಾಟನೆ ಮತ್ತು ಗಣ್ಯರ ಭೇಟಿ:

ICYM ರೊಸಾರಿಯೋ ಆಯೋಜಿಸಿದ್ದ ಈ ಪಂದ್ಯಾವಳಿಯಲ್ಲಿ ಒಟ್ಟು ಐದು ತಂಡಗಳು ಭಾಗವಹಿಸಿದ್ದವು. ಪಂದ್ಯಾವಳಿಯನ್ನು ನಟಿ ವೆನ್ಸಿಟಾ ಡಯಾಸ್, ವಿಜೆ ಡಿಕ್ಸನ್, ನಿರ್ದೇಶಕ ರಂಜಿತ್ ಬಜಾಲ್ ಮತ್ತು ’90 ಮಿಲಿ’ ತುಳು ಚಿತ್ರತಂಡ ಉದ್ಘಾಟಿಸಿ ಸಂಭ್ರಮ ಹೆಚ್ಚಿಸಿದರು. ಇದೇ ಸಂದರ್ಭದಲ್ಲಿ ‘ರೊಸಾರಿಯೋ ಕ್ರಿಕೆಟ್ ಫ್ರೆಂಡ್ಸ್’ನ ನೂತನ ಲೋಗೋವನ್ನು ಅನಾವರಣಗೊಳಿಸಲಾಯಿತು.

ಬಹುಮಾನ ವಿತರಣೆ:

ರೊಜಾರಿಯೊ ಕ್ಯಾಥೆಡ್ರಲ್ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ವಲೇರಿಯನ್ ಡಿಸೋಜ ಅವರು ವಿಜೇತ ತಂಡದ ಆ್ಯಸ್ಟನ್ ಫೆರ್ನಾಂಡಿಸ್ ಮತ್ತು ವಿಜಯ್ ಫೆರ್ನಾಂಡಿಸ್ ಹಾಗೂ ರನ್ನರ್ಸ್ ಅಪ್ ತಂಡದ ನೆಲ್ಸನ್ ಡಿಸೋಜ ಮತ್ತು ವಿನ್ಸೆಂಟ್ ಡಿಸೋಜ ಅವರಿಗೆ ಟ್ರೋಫಿಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ವಂದನೀಯ ಫಾದರ್ ಜೈಸನ್ ಲೋಬೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಿರಿಲ್ ರೊಸಾರಿಯೊ, ಕಾರ್ಯದರ್ಶಿ ಐಡಾ ಫುರ್ಟಾಡೊ ಮತ್ತು ಐವನ್ ಪಿಂಟೊ ಉಪಸ್ಥಿತರಿದ್ದರು. ಕ್ರಿಕೆಟ್ ಪ್ರೇಮಿಗಳ ಸಮ್ಮುಖದಲ್ಲಿ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page