August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ ಸಂಘಟಿಸುವ ಮತ್ತು ಪಕ್ಷದ ತಳಮಟ್ಟದ ಬಲವರ್ಧನೆಯ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಸಂಘಟನೆಯ ಮುಂದಿನ ಗುರಿಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಯಿತು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಯ್ಯ ಅಂಜುಮ್ ಅವರು ವಿಶೇಷವಾಗಿ ಭಾಗವಹಿಸಿ, ಯುವಜನರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಅನಿವಾರ್ಯತೆ ಹಾಗೂ ಮುಂಬರುವ ದಿನಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಮಾರ್ಗದರ್ಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ ಅವರು ಉಪಸ್ಥಿತರಿದ್ದು ಯುವ ಕಾರ್ಯಕರ್ತರಿಗೆ ಹುರಿದುಂಬಿಸಿದರು. ಇದೇ ಸಂದರ್ಭದಲ್ಲಿ ಸಂಘಟನೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಹೊಸದಾಗಿ ಕೆಲ ನಾಮನಿರ್ದೇಶಿತ ಸದಸ್ಯರನ್ನು ಸಮಿತಿಗೆ ಸೇರ್ಪಡೆಗೊಳಿಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶೇಖ್ ಮೊಹಮ್ಮದ್ ಅಥೀಫ್ ಸೇರಿದಂತೆ ವಿವಿಧ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು, ಜಿಲ್ಲೆಯಾದ್ಯಂತ ಕಾಂಗ್ರೆಸ್ ಪ್ರಭಾವವನ್ನು ಹೆಚ್ಚಿಸಲು ಒಮ್ಮತದ ನಿರ್ಧಾರ ಕೈಗೊಂಡರು.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page