August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಡುಪಿ ಧರ್ಮಕ್ಷೇತ್ರದ ನೂತನ ಶ್ರೇಷ್ಠ ಗುರುಗಳಾಗಿ ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ನೇಮಕ

ಬಿಷಪ್ ಪರಮ ಪೂಜ್ಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರಿಂದ ಅಧಿಕಾರ ಸ್ವೀಕಾರ

ಉಡುಪಿ ಧರ್ಮಕ್ಷೇತ್ರದ ನೂತನ ಬಿಷಪ್ ಪರಮ ಪೂಜ್ಯ ಅತೀ ವಂದನೀಯ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರು ಉಡುಪಿ ಧರ್ಮಕ್ಷೇತ್ರಕ್ಕೆ ನೂತನ ಶ್ರೇಷ್ಠ ಗುರುಗಳಾಗಿ (ವಿಕಾರ್ ಜನರಲ್) ವಂದನೀಯ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ಅವರನ್ನು ನೇಮಕ ಮಾಡಿದ್ದಾರೆ. ಪ್ರಸ್ತುತ ಇವರು ಕಳತ್ತೂರು ನಿತ್ಯಾದರ್ ಮಾತೆ ಚರ್ಚ್ ಇದರ ಪ್ರಧಾನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದರು.

ಇಂದು ಮೇ 02ರಂದು ಶನಿವಾರ ಉಡುಪಿ ಧರ್ಮಾಧ್ಯಕ್ಷರ ನಿವಾಸದಲ್ಲಿ ನಡೆದ ಧಾರ್ಮಿಕ ವಿಧಿಯೊಂದಿಗೆ ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ಅವರು ಅಧಿಕಾರ ಸ್ವೀಕರಿಸಿದರು. ಬಿಷಪ್ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರು ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ, ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಧರ್ಮಕ್ಷೇತ್ರದ ಚಾನ್ಸ್ ಲರ್ ಅತೀ ವಂದನೀಯ ಫಾದರ್ ಸ್ಟೀಫನ್ ಡಿಸೋಜ, ಕನ್ಸಲ್ಟರ್ ಮಂಡಳಿಯ ಸದಸ್ಯರು, ವಂದನೀಯ ಫಾದರ್ ಜಿತೇಶ್ ಕ್ಯಾಸ್ಟೆಲಿನೊ ಹಾಗೂ ಪ್ರೊಕ್ಯೂರೇಟರ್ ಅತೀ ವಂದನೀಯ ಫಾದರ್ ಮಾರ್ಸೆಲ್ ಡಿಸೋಜ ಉಪಸ್ಥಿತರಿದ್ದರು.

ಪರಿಚಯ ಮತ್ತು ಸೇವೆ:

ಮೂಲತಃ ಪೆರ್ನಾಲ್ ಫಾತಿಮಾ ಮಾತೆ ಚರ್ಚ್ ನ ಫಾದರ್ ಫ್ರಾನ್ಸಿಸ್ ಅವರು 1960 ಅಕ್ಟೋಬರ್ 20ರಂದು ಜೋನ್ ಮತ್ತು ತೆರೇಸಾ ಲೂವಿಸ್ ದಂಪತಿಗಳ ಪುತ್ರನಾಗಿ ಜನಿಸಿದರು. 1976 ಜೂನ್ 30ರಂದು ಮಂಗಳೂರು ಧರ್ಮಕ್ಷೇತ್ರದ ಸೆಮಿನರಿ ಸೇರಿದ ಇವರು, 1987 ಏಪ್ರಿಲ್ 28ರಂದು ಗುರುದೀಕ್ಷೆ ಪಡೆದರು.

ಸುದೀರ್ಘ 39 ವರ್ಷಗಳ ಸೇವಾವಧಿ:

* ಮಿಷನರಿ ಸೇವೆ: 1987 ರಿಂದ 1997 ರವರೆಗೆ ಬೀದರ್ ಮಿಷನ್‌ನ ವಿವಿಧ ಭಾಗಗಳಲ್ಲಿ ಸೇವೆ.

* ಪಾಲನಾ ಸೇವೆ: ಬಜಾಲ್, ಮಣಿಪಾಲ (2008-2016), ಮುದರಂಗಡಿ (2016-2022) ಮತ್ತು ಕಳತ್ತೂರು ಚರ್ಚ್‌ಗಳಲ್ಲಿ ಧರ್ಮಗುರುಗಳಾಗಿ ಸೇವೆ.

* ಸಂವಹನ ಕ್ಷೇತ್ರ: ಕೆನರಾ ಕಮ್ಯುನಿಕೇಶನ್ ಸೆಂಟರ್, ಸಂದೇಶ (ಪ್ರಾದೇಶಿಕ ಸಂವಹನ ಕೇಂದ್ರ) ನಿರ್ದೇಶಕರಾಗಿ ಹಾಗೂ ಮಂಗಳೂರು ಧರ್ಮಕ್ಷೇತ್ರದ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ (PRO) ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದಾರೆ.

ಫಾದರ್ ಫ್ರಾನ್ಸಿಸ್ ಕ್ಸೇವಿಯರ್ ಲೂವಿಸ್ ಅವರು 2026 ಮೇ 18ರಿಂದ ಜಾರಿಗೆ ಬರುವಂತೆ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನ ರೆಕ್ಟರ್ ಮತ್ತು ಧರ್ಮಗುರುಗಳಾಗಿ ಹಾಗೂ ಕಲ್ಯಾಣಪುರ ವಲಯದ ಪ್ರಧಾನ ಧರ್ಮಗುರುಗಳಾಗಿಯೂ (Vicar Forane) ಕಾರ್ಯನಿರ್ವಹಿಸಲಿದ್ದಾರೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page