July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೆಡಿಕಲ್ ಬಂದ್ – ಸಾರ್ವಜನಿಕರಿಗೆ ತೊಂದರೆಯಾಗದಂತೆ ಮಂಗಳೂರಿನಲ್ಲಿ ಪರ್ಯಾಯ ವ್ಯವಸ್ಥೆ; ಈ ನಂಬರ್‌ಗಳಿಗೆ ಕರೆ ಮಾಡಿ

ಆನ್‌ಲೈನ್ ಮೂಲಕ ಔಷಧಿಗಳ ಮಾರಾಟವನ್ನು ವಿರೋಧಿಸಿ ನಾಳೆ ಮೇ 20ರಂದು ಬುಧವಾರ ಮೆಡಿಕಲ್ ಅಂಗಡಿಗಳ ಬಂದ್‌ಗೆ ಕರೆ ನೀಡಲಾಗಿದೆ. ಆದರೆ, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ ತುರ್ತು ಔಷಧಿಗಳ ಕೊರತೆಯಾಗದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಸಹಾಯಕ ಔಷಧ ನಿಯಂತ್ರಕರ ಕಚೇರಿ ವಿಶೇಷ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿದೆ. ಬಂದ್ ದಿನದಂದು ಜಿಲ್ಲೆಯ ಹಲವು ಪ್ರಮುಖ ಫಾರ್ಮಸಿಗಳು ಮತ್ತು ಆಸ್ಪತ್ರೆಯ ಒಳಗಿನ ಔಷಧಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ತೆರೆದಿರುವ ಪ್ರಮುಖ ಔಷಧಿ ಕೇಂದ್ರಗಳು:

ಬಂದ್‌ನಿಂದ ವಿನಾಯಿತಿ ಪಡೆದು ಸಾರ್ವಜನಿಕರ ಸೇವೆಗೆ ಲಭ್ಯವಿರುವ ಮೆಡಿಕಲ್ ಅಂಗಡಿಗಳ ವಿವರ ಇಲ್ಲಿದೆ:

* ಅಪೋಲೋ ಫಾರ್ಮಸಿ: ಜಿಲ್ಲೆಯಾದ್ಯಂತ ಒಟ್ಟು 38 ಶಾಖೆಗಳು ತೆರೆದಿರುತ್ತವೆ.

* ಮೆಡ್ ಪ್ಲಸ್ ಫಾರ್ಮಸಿ: ಒಟ್ಟು 48 ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

* ಪ್ರಧಾನಮಂತ್ರಿ ಜನೌಷಧಿ ಕೇಂದ್ರ: ಬರೋಬ್ಬರಿ 130 ಕೇಂದ್ರಗಳು ಸಾರ್ವಜನಿಕರಿಗೆ ಲಭ್ಯವಿರಲಿವೆ.

* ಆಸ್ಪತ್ರೆಗಳ ಮೆಡಿಕಲ್ ಅಂಗಡಿಗಳು: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಆವರಣದಲ್ಲಿರುವ ಎಲ್ಲಾ ಔಷಧಿ ಅಂಗಡಿಗಳು 24X7 ಕಾರ್ಯನಿರ್ವಹಿಸಲಿವೆ.

ತುರ್ತು ಮಾಹಿತಿಗಾಗಿ ಸಂಪರ್ಕ ಸಂಖ್ಯೆಗಳು:

ಔಷಧಿಗಳ ಲಭ್ಯತೆಯ ಬಗ್ಗೆ ಮಾಹಿತಿ ಪಡೆಯಲು ಸಾರ್ವಜನಿಕರು ಆಯಾ ಭಾಗದ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ:

ಮಂಗಳೂರು ನಗರ –  9108466827

ಮುಲ್ಕಿ, ಕಿನ್ನಿಗೋಳಿ, ಮೂಡಬಿದ್ರಿ – 6364908172, 7625081353

ಬಂಟ್ವಾಳ, ಬಿ.ಸಿ. ರೋಡ್, ವಿಟ್ಲ – 9187234432

ನೋಡಲ್ ಅಧಿಕಾರಿಗಳ ಸಂಪರ್ಕ: ಬಂದ್ ಸಂದರ್ಭದಲ್ಲಿ ಯಾವುದೇ ತುರ್ತು ನೆರವು ಅಥವಾ ದೂರುಗಳಿಗಾಗಿ ಮಂಗಳೂರಿನ ಸಹಾಯಕ ಡ್ರಗ್ಸ್ ನಿಯಂತ್ರಕರನ್ನು (ನೋಡಲ್ ಅಧಿಕಾರಿ) ಮೊಬೈಲ್: 9448205177 ಅಥವಾ ಲ್ಯಾಂಡ್ ಲೈನ್: 0824-2218451 ಮೂಲಕ ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page