August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

SSLC ಮರುಮೌಲ್ಯಮಾಪನದಲ್ಲಿ ಮಿಂಚಿದ ಬಂಟ್ವಾಳದ SVS ಟೆಂಪಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧ್ರುವಿ

620 ಅಂಕದೊಂದಿಗೆ ತಾಲೂಕು ಟಾಪರ್ ಪಟ್ಟಿಗೆ ಸೇರ್ಪಡೆ

ಬಂಟ್ವಾಳ ತಾಲೂಕಿನ SVS ಟೆಂಪಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಧ್ರುವಿ ಮರುಮೌಲ್ಯಮಾಪನದ ಬಳಿಕ ಎರಡು ಅಂಕಗಳ ಹೆಚ್ಚಳ ಪಡೆದು ತಾಲೂಕಿನ ಪ್ರಥಮ ಸ್ಥಾನಿಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾಳೆ.

2025-26ನೇ ಸಾಲಿನ SSLC ಪರೀಕ್ಷೆಯಲ್ಲಿ ಆರಂಭದಲ್ಲಿ 618 ಅಂಕಗಳನ್ನು ಪಡೆದಿದ್ದ ಧ್ರುವಿ, ರಾಜ್ಯ ಮಟ್ಟದಲ್ಲಿ 8ನೇ ಸ್ಥಾನ ಪಡೆದಿದ್ದರು. ಆದರೆ ಕನ್ನಡ ವಿಷಯದಲ್ಲಿ ನಿರೀಕ್ಷಿತ ಅಂಕ ಸಿಗದ ಹಿನ್ನೆಲೆಯಲ್ಲಿ ಉತ್ತರ ಪತ್ರಿಕೆಯ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮರುಮೌಲ್ಯಮಾಪನದ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಕನ್ನಡ ವಿಷಯದಲ್ಲಿ ಹೆಚ್ಚುವರಿ ಎರಡು ಅಂಕಗಳನ್ನು ಪಡೆದು ಧ್ರುವಿ ಒಟ್ಟು 620 ಅಂಕಗಳನ್ನು ಗಳಿಸಿದ್ದಾರೆ. ಈ ಮೂಲಕ ನೂರಕ್ಕೆ ನೂರು ಅಂಕ ಪಡೆಯಬೇಕೆಂಬ ಅವರ ಕನಸು ನನಸಾಗಿದೆ.

620 ಅಂಕಗಳೊಂದಿಗೆ ಧ್ರುವಿ ಇದೀಗ ತಾಲೂಕಿನ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪಟ್ಟಿಗೆ ಸೇರಿಕೊಂಡಿದ್ದಾರೆ. ಈಗಾಗಲೇ 620 ಅಂಕ ಗಳಿಸಿದ್ದ ಮಾಣಿ ಪೆರಾಜೆಯ ಬಾಲವಿಕಾಸ ಶಾಲೆ ವಿದ್ಯಾರ್ಥಿನಿ ಪೂರ್ವಿ ಭಾರದ್ವಾಜ್ ಹಾಗೂ ಮೊಂಟೆಪದವು ಶಾಲಾ ವಿದ್ಯಾರ್ಥಿನಿ ಸಿಂಚನಾ ಅವರೊಂದಿಗೆ ಧ್ರುವಿಯೂ ಇದೀಗ ತಾಲೂಕು ಟಾಪರ್‌ಗಳ ಸಾಲಿನಲ್ಲಿ ಸ್ಥಾನ ಪಡೆದಿದ್ದಾರೆ.

ಮೂವರು ವಿದ್ಯಾರ್ಥಿನಿಯರು 620 ಅಂಕಗಳನ್ನು ಗಳಿಸುವ ಮೂಲಕ ಬಂಟ್ವಾಳ ತಾಲೂಕಿನ ಶೈಕ್ಷಣಿಕ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ. ಧ್ರುವಿ ಅವರು ಬಂಟ್ವಾಳ ಭಂಡಾರಿಬೆಟ್ಟು ನಿವಾಸಿಗಳಾದ ಸುನಿಲ್ ಹಾಗೂ ಹೇಮಲತಾ ದಂಪತಿಯ ಪುತ್ರಿಯಾಗಿದ್ದಾರೆ.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page