May 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬ್ಯಾರಿ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ದಫ್ ಉಸ್ತಾದ್ ಇಸ್ಮಾಯಿಲ್ ಮುಸ್ಲಿಯಾರ್ ಇನ್ನಿಲ್ಲ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ವಿಜೇತ, ಸಾಂಪ್ರದಾಯಿಕ ದಫ್ ಕಲೆಯ ಹಿರಿಯ ಉಸ್ತಾದ್ ಸುರಿಬೈಲು ನಿವಾಸಿ 87 ವರ್ಷ ಪ್ರಾಯದ ಇಸ್ಮಾಯಿಲ್ ಮುಸ್ಲಿಯಾರ್ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಮೇ 26ರಂದು ಮಂಗಳವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.

ದಫ್ ಕಲೆ ಮತ್ತು ಧಾರ್ಮಿಕ ಸೇವೆ:

ಆಧ್ಯಾತ್ಮಿಕ ಹಿನ್ನೆಲೆಯುಳ್ಳ ಸಾಂಪ್ರದಾಯಿಕ ‘ದಫ್ ರಾತಿಬ್’ ಕಲೆಯ ಮುಂಚೂಣಿ ನೇತೃತ್ವ ವಹಿಸುತ್ತಿದ್ದ ಇಸ್ಮಾಯಿಲ್ ಮುಸ್ಲಿಯಾರ್ ಅವರು, ತಮ್ಮ ಜೀವಿತಾವಧಿಯನ್ನು ದಫ್ ಕಲೆಯ ಬೆಳವಣಿಗೆಗಾಗಿ ಮುಡುಪಾಗಿಟ್ಟಿದ್ದರು. ಇವರ ಅಪಾರ ಕಲಾ ಸೇವೆಯನ್ನು ಪರಿಗಣಿಸಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು.

ಬಂಟ್ವಾಳ ತಾಲೂಕಿನ ಸುರಿಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ದೀರ್ಘಕಾಲ ಮುಹಝ್ಝಿನ್ (ಮುಕ್ರಿ) ಆಗಿ ಸೇವೆ ಸಲ್ಲಿಸಿದ್ದ ಇವರು, ಸಮಾಜಮುಖಿ ಕಾರ್ಯಗಳಲ್ಲೂ ಸಕ್ರಿಯರಾಗಿದ್ದರು. ಸುತ್ತಮುತ್ತಲಿನ ಪರಿಸರದಲ್ಲಿ ಯಾರೇ ಮರಣ ಹೊಂದಿದರೂ ಮುಂಚೂಣಿಯಲ್ಲಿ ನಿಂತು ಮಯ್ಯತ್ (ಶವ ಸಂಸ್ಕಾರ) ಪರಿಪಾಲನೆಯ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿಕೊಡುವ ಮೂಲಕ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು.

ಗಣ್ಯರ ಸಂತಾಪ:

ಮೃತರು ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗ ಹಾಗೂ ಶಿಷ್ಯಂದಿರನ್ನು ಅಗಲಿದ್ದಾರೆ. ಹಿರಿಯ ದಫ್ ಉಸ್ತಾದರ ನಿಧನಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ದಫ್ ಅಸೋಸಿಯೇಷನ್ ಅಧ್ಯಕ್ಷರಾದ ಲತೀಫ್ ನೇರಳಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

You may also like

News

ಮಂಗಳೂರಿನಲ್ಲಿ ನೈಟ್ ಬೀಟ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಕೇರಳಕ್ಕೆ ಓಡಿದ್ದ ಇಬ್ಬರು ಕಿರಾತಕರು ಸಿಸಿಬಿ ಬಲೆಯಲ್ಲಿ!

ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಸಿಮೆಂಟ್ ಶೀಟ್‌ನಿಂದ ಭೀಕರವಾಗಿ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು
News

ಕರಾವಳಿಯ ಹೆಣ್ಣುಮಗಳ ಐತಿಹಾಸಿಕ ಸಾಧನೆ – ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಡಿ’ಆಲ್ಮೇಡಾ ನೇಮಕ!

ದೃಢ ಸಂಕಲ್ಪ ಮತ್ತು ಕಠಿಣ ಪರಿಶ್ರಮವಿದ್ದರೆ ಯಾವುದೇ ಹಿನ್ನೆಲೆ ಇಲ್ಲದಿದ್ದರೂ ದೇಶದ ಅತ್ಯುನ್ನತ ಮಟ್ಟದಲ್ಲಿ ಗುರುತಿಸಿಕೊಳ್ಳಬಹುದು ಎಂಬುದನ್ನು ಮಂಗಳೂರಿನ ನಿಶೆಲ್ ಫ್ಲೋರಾ ಡಿ’ಆಲ್ಮೇಡಾ ಸಾಬೀತುಪಡಿಸಿದ್ದಾರೆ. ಮಂಗಳೂರಿನ ಪ್ರತಿಷ್ಠಿತ

You cannot copy content of this page