July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಹನ ಸವಾರರಿಗೆ ಬಂಪರ್ ಆಫರ್ – ಬಾಕಿ ಟ್ರಾಫಿಕ್ ದಂಡ ಪಾವತಿಗೆ 50% ರಿಯಾಯಿತಿ ಘೋಷಣೆ!

ನಿಮ್ಮ ವಾಹನದ ಮೇಲೆ ಸಂಚಾರ ನಿಯಮ ಉಲ್ಲಂಘನೆಯ ಇ-ಚಲನ್ (E-Challan) ಬಾಕಿ ಇದೆಯೇ? ಹಾಗಿದ್ದಲ್ಲಿ ನಿಮಗೊಂದು ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ವಿಶೇಷ ವಿನಾಯಿತಿಯಡಿ ಮಂಗಳೂರು ನಗರ ಪೊಲೀಸ್ ಇಲಾಖೆಯು ಬಾಕಿ ಇರುವ ಟ್ರಾಫಿಕ್ ದಂಡದ ಮೊತ್ತದಲ್ಲಿ ಭರ್ಜರಿ 50% ರಿಯಾಯಿತಿಯನ್ನು ಪ್ರಕಟಿಸಿದೆ. ಲೋಕ ಅದಾಲತ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಈ ರಿಯಾಯಿತಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಸವಾರರು ತಮ್ಮ ಬಾಕಿ ಪ್ರಕರಣಗಳನ್ನು ಅರ್ಧ ಬೆಲೆಗೆ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ರಿಯಾಯಿತಿಯ ಅವಧಿ ಮತ್ತು ನಿಯಮಗಳು:

* ಅವಧಿ: ಈ ವಿಶೇಷ ರಿಯಾಯಿತಿ ಸೌಲಭ್ಯವು 21 ಜೂನ್ 2026 ರಿಂದ 10 ಜುಲೈ 2026 ರವರೆಗೆ ಮಾತ್ರ ಲಭ್ಯವಿರುತ್ತದೆ.

* ಯಾರಿಗೆ ಅನ್ವಯ?: ಮೇ 2026 ರ ಮೊದಲು ನೋಂದಾಯಿಸಲಾದ ಎಲ್ಲಾ ಬಾಕಿ ಸಂಚಾರ ಇ-ಚಲನ್ ಪ್ರಕರಣಗಳಿಗೆ ಮಾತ್ರ ಈ 50% ರಿಯಾಯಿತಿ ಅನ್ವಯಿಸುತ್ತದೆ.

ಸಾರ್ವಜನಿಕರಲ್ಲಿ ಮಂಗಳೂರು ಪೊಲೀಸರ ಮನವಿ:

“ದಂಡ ರಹಿತವಾಗಿ, ಸುರಕ್ಷಿತ ಸಂಚಾರಕ್ಕೆ ನೀವು ಮುಂದಾಗಿ. ಜವಾಬ್ದಾರಿಯುತ ನಾಗರಿಕರಾಗಿ ನಿಯಮ ಪಾಲಿಸಿ, ದಂಡ ಪಾವತಿಸಿ ಕಾನೂನಿಗೆ ಗೌರವ ನೀಡಿ.”

ವಾಹನ ಸವಾರರು ತಡಮಾಡದೇ ಈ ಸೀಮಿತ ಅವಧಿಯ ಅವಕಾಶವನ್ನು ಬಳಸಿಕೊಂಡು, ತಮ್ಮ ವಾಹನಗಳ ಮೇಲಿರುವ ಬಾಕಿ ಇ-ಚಲನ್ ದಂಡವನ್ನು ಇಂದೇ ಪಾವತಿಸಿ ನಿಶ್ಚಿಂತರಾಗಲು ಕೋರಲಾಗಿದೆ.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page