August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರಾವಳಿಯಲ್ಲಿ ಕಿಂಗ್ ಖಾನ್ ಹವಾ – ಜೂನ್ 25ಕ್ಕೆ ಮಂಗಳೂರಿಗೆ ಬರಲಿದ್ದಾರೆ ಬಾಲಿವುಡ್ ಬಾದ್‌ಷಾ

ರೋಹನ್ ಕಾರ್ಪೊರೇಶನ್ ಮೆಗಾ ಪ್ಲಾನ್ – ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಶಾರುಖ್ ಖಾನ್ ಧಮಾಕಾ!

ಕರಾವಳಿ ಜನತೆಗೆ ಈಗ ಬಾಲಿವುಡ್ ಕಿಂಗ್ ಖಾನ್ ಶಾರುಖ್ ಅವರನ್ನು ಕಣ್ಣುಂಬಿಕೊಳ್ಳುವ ಸುವರ್ಣಾವಕಾಶ! ಜೂನ್ 25ರಂದು ಗುರುವಾರ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿರುವ ರೋಹನ್ ಕಾರ್ಪೊರೇಶನ್ ಸಂಸ್ಥೆಯ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ವಿಶೇಷ ಕಾರ್ಯಕ್ರಮಕ್ಕೆ ಬಾಲಿವುಡ್ ಬಾದ್‌ಷಾ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ.

ವಿಶೇಷತೆಗಳು:

* ಸಮಯ: ಸಂಜೆ 4 ಗಂಟೆಯಿಂದಲೇ ಗಣ್ಯರ ಆಗಮನ ಆರಂಭವಾಗಲಿದೆ.

* ಪ್ರವೇಶ: ಕೇವಲ ಮುಂಚಿತವಾಗಿ ನೋಂದಾಯಿಸಿಕೊಂಡು, ಅಧಿಕೃತ ಪಾಸ್ ಹೊಂದಿರುವವರಿಗೆ ಮಾತ್ರ ಅವಕಾಶ.

* ಗಣ್ಯರ ಸಮಾಗಮ: ರಾಜಕೀಯ, ಉದ್ಯಮ ಹಾಗೂ ಸಿನಿಮಾ ರಂಗದ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

“ಜಾಗತಿಕ ಮಟ್ಟದ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ನಮ್ಮ ಕರಾವಳಿಗೆ ಕರೆತರುತ್ತಿರುವುದು ನಮ್ಮ ಸಂಸ್ಥೆಯ ಹೆಮ್ಮೆ” ಎಂದು ರೋಹನ್ ಕಾರ್ಪೊರೇಶನ್‌ನ ಡಾ. ರೋಹನ್ ಮೊಂತೇರೊ ಮತ್ತು ಡಿಯಾನ್ ಮೊಂತೇರೊ ತಿಳಿಸಿದ್ದಾರೆ. ಈ ಭವ್ಯ ಕಾರ್ಯಕ್ರಮದ ಕುರಿತು ಇಡೀ ಮಂಗಳೂರಿನಲ್ಲಿ ಈಗಿನಿಂದಲೇ ಭಾರಿ ಕ್ರೇಜ್ ಶುರುವಾಗಿದೆ.

* ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 90355 64026

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page