August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

3 ವರ್ಷ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು

ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ, ಭಾರತೀಯ ದಂಡ ಸಂಹಿತೆಯ 379ನೇ ಕಲಂನಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಳ್ತಂಗಡಿ ನಿವಾಸಿ 41 ವರ್ಷ ಪ್ರಾಯದ ರಾಜೇಶ್ ಎಂಬಾತ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ.

ವಿಟ್ಲ ಪೊಲೀಸ್ ಠಾಣೆಯ ASI ಜಯರಾಮ್ ನೇತೃತ್ವದಲ್ಲಿ ಸಿಪಿಸಿ 2355 ವೆಂಕಪ್ಪ ಹಾಗೂ ಸಿಪಿಸಿ 2462 ಶಿವಾನಂದ ಅವರ ತಂಡವು ಜುಲೈ 6ರಂದು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿ, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page