July 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜು ಸ್ಟೀಫನ್ ಡಿಸೋಜ ಅವರಿಗೆ ಗೆಲುವು – ಕಾಸರಗೋಡಿನಲ್ಲಿ ಬ್ಯಾಂಕ್‌ಗೆ ದಂಡ ವಿಧಿಸಿದ ಗ್ರಾಹಕ ಆಯೋಗ!

ಕಾಸರಗೋಡು ಸೌತ್ ಇಂಡಿಯನ್ ಬ್ಯಾಂಕ್‌ನ ಸೀತಾಂಗೋಳಿ ಶಾಖೆಯ ವಿರುದ್ಧ ದೂರು ನೀಡಿದ್ದ ಗ್ರಾಹಕರಾದ ರಾಜು ಸ್ಟೀಫನ್ ಡಿಸೋಜ ಅವರಿಗೆ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗವು ಮಹತ್ವದ ತೀರ್ಪು ನೀಡಿದೆ. ಗ್ರಾಹಕರ ಖಾತೆಯಿಂದ ಅನಗತ್ಯವಾಗಿ ಕಡಿತಗೊಳಿಸಲಾಗಿದ್ದ ಹಣವನ್ನು ಮರುಪಾವತಿಸುವಂತೆ ಹಾಗೂ ಅವರಿಗೆ ಉಂಟಾದ ಮಾನಸಿಕ ವೇದನೆಗೆ ಸೂಕ್ತ ಪರಿಹಾರ ನೀಡುವಂತೆ ಬ್ಯಾಂಕ್‌ಗೆ ಆಯೋಗ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:

ರಾಜು ಸ್ಟೀಫನ್ ಡಿಸೋಜ ಅವರು 2022ರಲ್ಲಿ ಸೌತ್ ಇಂಡಿಯನ್ ಬ್ಯಾಂಕ್‌ನ ಸೀತಾಂಗೋಳಿ ಶಾಖೆಯಲ್ಲಿ ಚಾಲ್ತಿ (Current) ಖಾತೆ ತೆರೆದು, ಕನಿಷ್ಠ ಬಾಕಿ ಮೊತ್ತವನ್ನು ಠೇವಣಿ ಮಾಡಿದ್ದರು. ಆದರೆ, ಬ್ಯಾಂಕ್ ಎಸ್ಎಂಎಸ್ (SMS) ಸೇವಾ ಶುಲ್ಕದ ಹೆಸರಿನಲ್ಲಿ ಅವರ ಖಾತೆಯಿಂದ ಹಣ ಕಡಿತಗೊಳಿಸಿತ್ತು. ಇದರಿಂದಾಗಿ ಖಾತೆಯಲ್ಲಿದ್ದ ಹಣ ಕನಿಷ್ಠ ಬಾಕಿ ಮೊತ್ತಕ್ಕಿಂತ ಕಡಿಮೆಯಾಗಿ, ಬ್ಯಾಂಕ್ ಮತ್ತೆ ಕನಿಷ್ಠ ಬಾಕಿ ಕಾಯ್ದುಕೊಳ್ಳದಿದ್ದಕ್ಕೆ ದಂಡ ವಿಧಿಸಲು ಪ್ರಾರಂಭಿಸಿತ್ತು. ಇದು ಮುಂದುವರಿದಾಗ ಆರ್ಥಿಕ ನಷ್ಟ ಹಾಗೂ ಮಾನಸಿಕ ಹಿಂಸೆ ಅನುಭವಿಸಿದ ರಾಜು ಡಿಸೋಜ ಅವರು ಆಯೋಗದ ಮೊರೆ ಹೋಗಿದ್ದರು.

ನ್ಯಾಯಾಲಯದ ತೀರ್ಪು:

ಖಾತೆಯಿಂದ ಹಣ ಕಡಿತಗೊಳಿಸುವ ಮುನ್ನ ಅಥವಾ ತಕ್ಷಣವೇ ಗ್ರಾಹಕರಿಗೆ ಸ್ಪಷ್ಟ ಮಾಹಿತಿ ನೀಡುವುದು ಬ್ಯಾಂಕಿನ ಕರ್ತವ್ಯ ಎಂದು ಆಯೋಗ ಅಭಿಪ್ರಾಯಪಟ್ಟಿದೆ. ಉಭಯ ಪಕ್ಷಗಳ ವಾದ ಆಲಿಸಿದ ಆಯೋಗವು, ರಾಜು ಸ್ಟೀಫನ್ ಡಿಸೋಜ ಅವರ ಪರವಾಗಿ ತೀರ್ಪು ನೀಡಿ, ಕಡಿತಗೊಳಿಸಿದ ಮೊತ್ತವನ್ನು ಮರುಪಾವತಿಸಲು, ಮಾನಸಿಕ ಅನಾನುಕೂಲತೆಗೆ ಪರಿಹಾರ ಹಾಗೂ ಪ್ರಕರಣದ ವೆಚ್ಚವನ್ನು ಪಾವತಿಸಲು ಬ್ಯಾಂಕ್‌ಗೆ ಆದೇಶ ನೀಡಿದೆ.

ಈ ಪ್ರಕರಣದಲ್ಲಿ ದೂರುದಾರರಾದ ರಾಜು ಸ್ಟೀಫನ್ ಡಿಸೋಜ ಅವರ ಪರವಾಗಿ ಕಾಸರಗೋಡಿನ ಹಿರಿಯ ನ್ಯಾಯವಾದಿ ಥಾಮಸ್ ಡಿಸೋಜ ಎಂ.ಎಸ್. ವಾದ ಮಂಡಿಸಿದ್ದರು.

You may also like

News

ದಕ್ಷಿಣ ಕನ್ನಡ ರಸ್ತೆ ಅಪಘಾತ ತಡೆಗೆ ಹೈಟೆಕ್ ಕಣ್ಣು – ಸಂಚಾರ ನಿಯಮ ಉಲ್ಲಂಘಿಸಿದರೆ ನೇರ ಮನೆಗೆ ನೋಟೀಸ್!

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ಹಾಗೂ ಸಂಚಾರ ನಿಯಮಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಮಹತ್ವದ
News

ಕ್ರೈಸ್ತ ಸಮುದಾಯದ ಐಕ್ಯತೆಗೆ ದಾವಣಗೆರೆ ಸಾಕ್ಷಿ – ಕರ್ನಾಟಕ ಕ್ರೈಸ್ತ ಸಂಘಟನೆಯಿಂದ ಐಕ್ಯತಾ ಕೂಟ

ಅನ್ಯಾಯದ ವಿರುದ್ಧ ಯುವಕರು ಧ್ವನಿಯೆತ್ತಲು ಸಹೋದರ ಸ್ಟ್ಯಾನಿ ಪಿಂಟೋ ಬೆಂಗಳೂರು ಕರೆ ಜಿಲ್ಲಾ ನೂತನ ಸಮಿತಿ ರಚನೆ!   ದಾವಣಗೆರೆ ಇಲ್ಲಿನ ನಗರದಲ್ಲಿ ಜುಲೈ 22ರಂದು ಬುಧವಾರ

You cannot copy content of this page