August 23, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

9 ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಶಬೀರ್ ಕೊನೆಗೂ ಬಂಧನ!

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 9 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪುಂಜಾಲಕಟ್ಟೆ ಠಾಣೆಯ ಅಕ್ರ. 156/2016, ಐಪಿಸಿ ಸೆಕ್ಷನ್ 379 ಹಾಗೂ MMRD ಕಾಯ್ದೆಯ ಸೆಕ್ಷನ್ 42, 42, 44 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಬೀರ್ ಎಂಬಾತನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ 1023 ರಾಜೇಶ್, ಕಾನ್‌ಸ್ಟೆಬಲ್ 2276 ಚೋಳಪ್ಪ ಸಂಶಿ ಹಾಗೂ ಕಾನ್‌ಸ್ಟೆಬಲ್ 2524 ನಾಗರಾಜ್ ಅವರು ಚಿಕ್ಕಮಗಳೂರಿನಲ್ಲಿ ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಆಗಸ್ಟ್ 22ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸುಮಾರು ಒಂಬತ್ತು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಪುಂಜಾಲಕಟ್ಟೆ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

You may also like

News

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು, ಭಯ ಮೂಡಿಸುವ ಸಂದೇಶ – ಫೇಸ್‌ಬುಕ್ ಖಾತೆದಾರನ ವಿರುದ್ಧ ಪ್ರಕರಣ

ಪುತ್ತೂರು ದರ್ಭೆ ಪ್ರದೇಶದಲ್ಲಿ ಆಗಸ್ಟ್ 21ರಂದು ಶುಕ್ರವಾರ ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟುಮಾಡುವ ರೀತಿಯಲ್ಲಿ ಸಂದೇಶ
News

ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಮೂರು ಜಾನುವಾರುಗಳ ರಕ್ಷಣೆ, ವಾಹನ ಸಹಿತ ಆರೋಪಿ ವಶಕ್ಕೆ

ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವನ್ನು ಪುತ್ತೂರು ನಗರ ಠಾಣೆ ಪೊಲೀಸರು ತಡೆದು ಪರಿಶೀಲಿಸಿ, ವಾಹನದಲ್ಲಿದ್ದ ಮೂರು ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು

You cannot copy content of this page