August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು ಅಖಿಲ ಭಾರತ ಕ್ರೈಸ್ತ ಮಹಾಸಭಾ (ನೋಂದಾಯಿತ) ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಾರ್ಮಿನ್ ಲೂಯಿಸ್ ನೇತೃತ್ವದಲ್ಲಿ ಬೈಂದೂರು ತಾಲೂಕಿನ ಕ್ರೈಸ್ತ ಸಮುದಾಯದ ಸದಸ್ಯರು ಮನವಿ ಸಲ್ಲಿಸಿದರು.

ಆಗಸ್ಟ್ 29ರಂದು ಶನಿವಾರ ಬೈಂದೂರು ತಾಲೂಕು ತಹಶೀಲ್ದಾರ್ ಅವರ ಅನುಪಸ್ಥಿತಿಯಲ್ಲಿ ಉಪತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ನಿಯೋಗ, ಬಳಿಕ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಚೇರಿಗೂ ಭೇಟಿ ನೀಡಿ, ಸೆಪ್ಟೆಂಬರ್ 8ರಂದು ಕ್ರೈಸ್ತ ಧರ್ಮದ ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವಂತೆ ಮನವಿ ಮಾಡಿತು.

ಈ ಸಂದರ್ಭದಲ್ಲಿ ಬೈಂದೂರು ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟೀಫನ್ ಡಯಾಸ್, ಕಾರ್ಯದರ್ಶಿ ವೀಣಾ ಜೋಸೆಫ್ ಫೆರ್ನಾಂಡಿಸ್, ಸಂಯೋಜಕಿ ಜೊಸ್ಪಿನ್ ರೊಡ್ರಿಗಸ್, ಆಶಾ ಡಯಾಸ್, ಜ್ಯೋತಿ ಫೆರ್ನಾಂಡಿಸ್, ಐಡಾ ಡಯಾಸ್, ಸ್ಟೀಫನ್ ರಾಜ್ ಫೆರ್ನಾಂಡಿಸ್ ಹಾಗೂ ಟ್ರೆಸಿಲ್ಲಾ ಕ್ರಾಸ್ತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

You may also like

News

ಪುತ್ತೂರು ಚಲೋಗೆ ಪೊಲೀಸ್ ಸರ್ಪಗಾವಲು – ಹಿರಿಯ ಅಧಿಕಾರಿಗಳು ಸೇರಿ ಭಾರೀ ಬಂದೋಬಸ್ತ್

ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ಪುತ್ತೂರು: ಆಗಸ್ಟ್ 31ರಂದು ಸೋಮವಾರ ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು
News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು

You cannot copy content of this page