July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯಲ್ಲಿ ಉಚಿತ ಯೋಗ ಶಿಕ್ಷಣ ತರಗತಿಗಳು ಪ್ರಾರಂಭ

ರೋಟರಿ ಕ್ಲಬ್ ಬಜ್ಪೆ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕಾವೂರು ನಗರ ಇವರ ಸಹಯೋಗದೊಂದಿಗೆ 48 ದಿವಸಗಳ ಉಚಿತ ಯೋಗ ಶಿಕ್ಷಣ ತರಗತಿಯು ಸಪ್ಟಂಬರ್ 15ರಂದು ಆದಿತ್ಯವಾರ ಸಂಜೆ 5:30ಕ್ಕೆ ಬಜ್ಪೆಯಲ್ಲಿರುವ ರೋಟರಿ ಕ್ಲಬ್ ಸ್ವಾಮಿಲಪದವು ಇಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರಾರ ಶಾಖೆಯ ಯೋಗ ಶಿಕ್ಷಕಿ ಪವಿತ್ರ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಬಜ್ಪೆ ರೋಟರಿ ಕ್ಲಬ್ ನ ಅಧ್ಯಕ್ಷ ಜೋಕಿಂ ಡಿಕೋಸ್ತ ಆಗಮಿಸಿದ್ದರು. ಸಮಾರಂಭದಲ್ಲಿ ಬಜ್ಪೆ ಶಾಖೆಯ ಶಿಕ್ಷಕ ಪದ್ಮನಾಭ ಇವರು ಯೋಗದ ಬಗ್ಗೆ ಪ್ರಸ್ತಾವಿಕ ಭಾಷಣ ಮಾಡಿದರು.

ಯೋಗ ಶಿಕ್ಷಣದ ಜೊತೆಗೆ ಆರೋಗ್ಯ, ಧನಾತ್ಮಕ ಚಿಂತನೆ, ಕ್ರಿಯಾಶೀಲ ವ್ಯಕ್ತಿತ್ವ, ಆದರ್ಶ ಕುಟುಂಬದ ತರಬೇತಿ ನೀಡುತ್ತಾ ಸಮಾಜದಲ್ಲಿ ಉತ್ತಮವಾದ ಪರಿವರ್ತನೆಗೆ ಕಾರಣವಾಗಿದೆ.  ಮಧುಮೇಹ, ರಕ್ತದೊತ್ತಡ, ಬೊಜ್ಜಿನ ಸಮಸ್ಯೆ, ಆ್ಯಸಿಡಿಟಿ, ನೆನಪಿನ ಶಕ್ತಿಯ ಚುರುಕಿಗೆ, ಸಂಧಿವಾತ, ನಿದ್ರಾಹೀನತೆ, ಮಾನಸಿಕ ಒತ್ತಡ, ಮೂಲವ್ಯಾಧಿ, ಗಂಟುನೋವು, ಬೆನ್ನುನೋವು, ಮೈಗ್ರೇನ್, ತಲೆನೋವು ಇವುಗಳಿಗೆ ಸೂಕ್ತ ಚಿಕಿತ್ಸಾ ಕ್ರಮವನ್ನು ಯೋಗದ ಮೂಲಕ ನೀಡಿ ಗರಿಷ್ಠ ಪ್ರಮಾಣದಲ್ಲಿ ನಿಯಂತ್ರಿಸಬಹುದು. ಕೇಂದ್ರ ಸಮಿತಿಯಿಂದ ತರಬೇತಿ ಪಡೆದ ಶಿಕ್ಷಕರಿಂದ ತರಗತಿಗಳನ್ನು ನಡೆಸಲಾಗುವುದು. 10 ರಿಂದ ಮೇಲ್ಪಟ್ಟ ಎಲ್ಲಾ ವಯಸ್ಸಿನವರು ಭಾಗವಹಿಸಬಹುದು. ನಿತ್ಯ ತರಗತಿ ಸಪ್ಟಂಬರ್ 16ರಿಂದ ಬೆಳಿಗ್ಗೆ 5:00 ರಿಂದ 6:30 ರವರೆಗೆ ನಡೆಯುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಬಜ್ಪೆ ಶಾಖೆಯ ಯೋಗ ಬಂಧುಗಳು ನೆರವೇರಿಸಿ, ಕೇಶವ ವಯುಕ್ತಿಕ ಪ್ರಾರ್ಥನೆ ಸಲ್ಲಿಸಿ, ದೇವ್ ದಾಸ್ ಸ್ವಾಗತಿಸಿ, ಗಂಗಾಧರ ವಂದಿಸಿ, ಮಾಧವ ನಿರೂಪಿಸಿದರು. ಲಘು ಉಪಹಾರ ಪ್ರಸಾದವನ್ನು ಅನ್ನ ಪೂರ್ಣೇಶ್ವರಿ ಮಂತ್ರದೊಂದಿಗೆ ಚಿನ್ಮಯಿ ನೀಡಿದರು. ಸಮಾರಂಭದಲ್ಲಿ ಒಟ್ಟು 41 ಮಂದಿ ಭಾಗವಹಿಸಿದ್ದರು.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page