May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪರ್ಲೊಟ್ಟಿನಲ್ಲಿ ಇಶ್ಟೇ ಮದೀನಾ ಮಿಲಾದ್ ಪೆಸ್ಟ್

ಬಂಟ್ವಾಳ : ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಮತ್ತು ನೂರುಲ್ ಹುದಾ ಮದರಸ ಇದರ ವತಿಯಿಂದ ಇಶ್ಟೇ ಮದೀನಾ ಮಿಲಾದ್ ಪೆಸ್ಟ್ ಕಾರ್ಯಕ್ರಮ ಬುಧವಾರ ರಾತ್ರಿ ಮಸೀದಿ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಡಾಜೆ ಬದ್ರಿಯಾ ಜುಮಾ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ ಮಾತನಾಡಿ, ಲೋಕ ಪ್ರವಾದಿ ಮುಹಮ್ಮದ್ ಪೈಗಂಬರರ ಜೀವನ ಚರ್ಯೆ ಸರ್ವರಿಗೂ ಮಾದರಿ, ಪ್ರವಾದಿಯವರ ಜೀವನಶೈಲಿ ಯಾರನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಂಡು ಶಾಂತಿ ಸೌಹಾರ್ದತೆಯಿಂದ ಜೀವಿಸೋಣ ಎಂದು ಕರೆ ನೀಡಿದರು.

   ಮಸೀದಿ ಅಧ್ಯಕ್ಷ ಹೈದರ್ ಪರ್ಲೊಟ್ಟು ಅಧ್ಯಕ್ಷತೆ ವಹಿಸಿದ್ದರು. ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಖತೀಬ್ ಇಬ್ರಾಹಿಂ ದಾರಿಮಿ ಉದ್ಘಾಟಿಸಿದರು. ಕೆ.ಬಿ. ಕಾಸಿಂ ಹಾಜಿ ಮಿತ್ತೂರು, ಫಾರೂಕ್ ಹನೀಫಿ, ಇಸಾಕ್ ಕೌಸರಿ, ದಕ್ಷಿಣ ಕನ್ನಡ ಜಿಲ್ಲಾ ಮದರಸ ಮೆನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ರಫೀಕ್ ಹಾಜಿ ನೇರಳಕಟ್ಟೆ ಮಾತನಾಡಿ ಶುಭ ಹಾರೈಸಿದರು. ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಆಡಳಿತ ಸಮಿತಿ ಉಪಾಧ್ಯಕ್ಷ ಪಿ.ಕೆ. ಅಬ್ಬಾಸ್, ಕಾರ್ಯದರ್ಶಿ ಪಿ.ಕೆ. ಝುಬೈರ್, ಜೊತೆ ಕಾರ್ಯದರ್ಶಿ ಆಶಿಕ್, ಪ್ರಮುಖರಾದ ಫಾರೂಕ್ ಹಾಜಿ ಸುಲ್ತಾನ್, ಅಬ್ದುಲ್ ಖಾದರ್ ದರ್ಬಾರ್, ಪಿ.ಕೆ. ರಶೀದ್, ಸಾಹುಲ್ ಹಮೀದ್ (ಅಮ್ಮಿ), ಸಿದ್ದೀಕ್, ಸಮದ್, ಜುನೈದ್, ಕೆ.ಬಿ. ಇಸ್ಮಾಯಿಲ್, ಪಿ.ಕೆ. ರಹಿಮಾನ್ (ಅದ್ದು), ಶರೀಫ್ ಪರ್ಲೊಟ್ಟು, ಯೂಸುಫ್ ಸಹೀದ್ ನೇರಳಕಟ್ಟೆ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು

      ಇದೇ ವೇಳೆ ಮದರಸ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಸೀದಿ ಖತೀಬ್ ಸೈದಾಲಿ ಮುಸ್ಲಿಯಾರ್ ಹಾಗೂ ಮುಅಝ್ಝಿನ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಅವರನ್ನು ಗೌರವಿಸಲಾಯಿತು. ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಖತೀಬ್ ಸೈದಾಲಿ ಮುಸ್ಲಿಯಾರ್ ಸ್ವಾಗತಿಸಿ, ಲತೀಫ್ ನೇರಳಕಟ್ಟೆ ವಂದಿಸಿದರು. ಮದ್ರಸ ವಿದ್ಯಾರ್ಥಿ ಸಜ್ಜಾದ್ ಕಿರಾಅತ್ ಪಠಿಸಿದರು. ಪಿ.ಕೆ. ಶರೀಫ್ ಕಾರ್ಯಕ್ರಮ ನಿರೂಪಿಸಿದರು.

You may also like

News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC
News

ICYM BORIMAR ಸಂಘಟನೆಯಲ್ಲಿ ‘ಕುಟುಂಬ ರಾಜಕಾರಣ’?: ಯಾರಿಗೂ ತಿಳಿಸದೇ ಒಳಗಿಂದೊಳಗೆ ಚುನಾವಣೆ ನಡೆಸಿದ ಸಚೇತಕ! ಭುಗಿಲೆದ್ದ ಆಕ್ರೋಶ

ಮಂಗಳೂರು ಧರ್ಮಾಧ್ಯಕ್ಷರಿಗೆ ಲಿಖಿತ ದೂರು ನೀಡಿದ ಚರ್ಚ್ ಹಿಂದಿನ ಪಾಲನಾ ಸಮಿತಿ ಕ್ರೈಸ್ತ ಯುವಜನರ ಪ್ರತಿಷ್ಠಿತ ಸಂಘಟನೆಯಾದ ICYM ಬೊರಿಮಾರ್ (BORIMAR) ಘಟಕದಲ್ಲಿ ಸಚೇತಕನು (ANIMATOR) ಧರ್ಮಕ್ಷೇತ್ರದ

You cannot copy content of this page