October 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಸ್ತಿ ನೋಂದಣಿ ಮಾಡುವವರಿಗೆ ಸುವರ್ಣಾವಕಾಶ ಶನಿವಾರ ಮತ್ತು ಭಾನುವಾರ ರಜೆ ದಿನಗಳಲ್ಲೂ ಅವಕಾಶ ಕಲ್ಪಿಸಿದ ಸರಕಾರ

ರಾಜ್ಯದಲ್ಲಿ ಅಕ್ಟೋಬರ್ 21ರಿಂದ ಶನಿವಾರ ಮತ್ತು ಭಾನುವಾರದ ರಜೆ ದಿನಗಳಲ್ಲೂ ಉಪ ನೋಂದಣಾಧಿಕಾರಿಗಳ ಕಚೇರಿಗಳು ಕಾರ್ಯನಿರ್ವಹಿಸಲಿವೆ. ಆಸ್ತಿ ನೋಂದಣಿ, ವರ್ಗಾವಣೆ ಸೇರಿದಂತೆ ಎಲ್ಲ ನೋಂದಣಿಗಳನ್ನು ಈ ದಿನಗಳಲ್ಲೂ ನಿರ್ವಹಿಸಬಹುದು.

ಶನಿವಾರ ಮತ್ತು ಭಾನುವಾರ ನೋಂದಣಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಈ ಹಿಂದಿನಿಂದಲೇ ಇತ್ತು. ಇದರಿಂದ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವವರಿಗೆ ಹಾಗೂ ಹೊರ ರಾಜ್ಯದಲ್ಲಿ ಕಾರ್ಯನಿರ್ವಹಿಸುವವರಿಗೆ ಅನುಕೂಲವಾಗಲಿದೆ. ಪ್ರತಿ ಜಿಲ್ಲೆಯಲ್ಲಿ ನಾಲ್ಕು ಅಥವಾ ಐದು ಉಪ ನೋಂದಣಿ ಕಚೇರಿಗಳಿದ್ದರೆ, ಒಂದು ಕಚೇರಿ ಮಾತ್ರ ಈ ಎರಡು ದಿವಸಗಳಲ್ಲಿ ಕಾರ್ಯನಿರ್ವಹಿಸಲಿವೆ. ರಜಾ ದಿನಗಳಲ್ಲಿ ಕಾರ್ಯನಿರ್ವಹಿಸಿದ ಕಚೇರಿಗಳಿಗೆ ಮಂಗಳವಾರ ರಜೆ ನೀಡಲಾಗುತ್ತದೆ.

ಸ್ವತ್ತು ನೋಂದಾಯಿಸಿಕೊಳ್ಳಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವಾಗಲೇ ಶನಿವಾರ ಮತ್ತು ಭಾನುವಾರ ನೋಂದಣಿ ಮಾಡಿಸಿಕೊಳ್ಳುವ ನಮೂದನ್ನು ಅರ್ಜಿದಾರನು ಮಾಡಬೇಕಾಗುತ್ತದೆ. ಯಾವ ಕಚೇರಿಗಳು ಶನಿವಾರ ಮತ್ತು ಭಾನುವಾರ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಆನ್‌ಲೈನ್‌ ಮೂಲಕವೇ ಸಾರ್ವಜನಿಕರಿಗೆ ತಿಳಿಸಲಾಗುವುದು. ಇದಕ್ಕಾಗಿ ಕಾನೂನಿನ ತಿದ್ದುಪಡಿಯನ್ನು ಮಾಡಿ ಸಚಿವ ಸಂಪುಟದ ಒಪ್ಪಿಗೆಯನ್ನು ಪಡೆಯಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಒಪ್ಪಿಗೆಯನ್ನೂ ಪಡೆಯಲಾಗಿದೆ. ಇನ್ನು ರಜೆ ದಿನಗಳಲ್ಲೂ ಆಸ್ತಿ ನೋಂದಣಿ ಖಾಸಗಿ ನೌಕರರಿಗೆ ಅನುಕೂಲ ಕಲ್ಪಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.

You may also like

News

ತಲೆಮರೆಸಿಕೊಂಡ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮ

ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯ ಆರೋಪಿಗಳ ಜಾಮೀನುದಾರರ
News

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ

ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು – ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ಜಗತ್ತಿನಲ್ಲಿ ಹಲವಾರು ಸೌಖರ್ಯಗಳಿದ್ದರೂ‌

You cannot copy content of this page