May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ “ಪೋಷಣ್ ಮಾಸಾಚರಣೆ – 2024″ರ ಸಮಾರೋಪ ಸಮಾರಂಭ

ಬಂಟ್ವಾಳ :  ಎಲ್ಲಾ ಹೆತ್ತವರು ಮಕ್ಕಳ‌ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಆದ್ಯತೆ  ನೀಡುತ್ತಿರುವುದು ಆಶಾದಾಯಕ  ಬೆಳವಣಿಗೆಯಾಗಿದ್ದು, ಈ ಜಾಗೃತಿ ಕಾರ್ಯದಲ್ಲಿ ಅಂಗನವಾಡಿ ಕೇಂದ್ರಗಳ‌ ಪಾತ್ರ ಮಹತ್ತರವಾದದ್ದು  ಎಂದು  ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ರೋಟರಿ ಕ್ಲಬ್ ಬಿ.ಸಿ. ರೋಡ್ ಸಿಟಿ, ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ, ಬಂಟ್ವಾಳ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಸಜಿಪಮೂಡ ಇವರ ಸಹಭಾಗಿತ್ವದಲ್ಲಿ ಬಿ.ಸಿ. ರೋಡ್ ಇಲ್ಲಿನ ರೋಟರಿ ಸಭಾಂಗಣದಲ್ಲಿ ಸೋಮವಾರ ಸಪ್ಟಂಬರ್ 30ರಂದು ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ “ಪೋಷಣ್ ಮಾಸಾಚರಣೆ-2024″ರ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ಜಾಗೃತಿಯ ಕೆಲಸ ನಿರಂತರವಾಗಿ‌ ಮುನ್ನಡೆಯಬೇಕು‌ ಎಂದ ಅವರು, ಬಂಟ್ವಾಳ ತಾಲೂಕು ಅಪೌಷ್ಠಿಕತೆ ಮುಕ್ತ ತಾಲೂಕು ಆಗುವಲ್ಲಿ ಪ್ರತಿಯೊಬ್ಬರೂ ಶ್ರಮಿಸುವಂತೆ ಕರೆ ನೀಡಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಯವರು ಅಧ್ಯಕ್ಷತೆ ವಹಿಸಿದ್ದರು,ಹೆರಿಗೆ ಸಂದರ್ಭದಲ್ಲಿ ತಾಯಿ ಮರಣ ಹಾಗೂ ಶಿಶುಮರಣಗಳನ್ನು ತಡೆಯುವ ಉದ್ದೇಶದಿಂದ ಪೋಷಣ್ ಅಭಿಯಾನ  ಸಮುದಾಯ ಜಾಗೃತಿಯ ಕಾರ್ಯ ನಡೆಸುತ್ತಿದೆ ಎಂದರು.

ಜಿಲ್ಲಾ ನಿರೂಪಣಾಧಿಕಾರಿ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ಸಜಿಪಮೂಡ  ಆರೋಗ್ಯ ಕೇಂದ್ರದ  ಡಾ. ಮಣಿಕರ್ಣಿಕ, ಬಿ.ಸಿ. ರೋಡ್ ಸಿಟಿ ರೋಟರಿಕ್ಲಬ್ ಅಧ್ಯಕ್ಷ  ಸೇಸಪ್ಪ ಮಾಸ್ಟರ್, ಕಾರ್ಯದರ್ಶಿ ಮಧುಸೂದನ್ ಶೆಣೈ, ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ (ರಿ) ಅಧ್ಯಕ್ಷೆ  ಶೋಭಾ ಸಾಸ್ತಾನ  ಉಪಸ್ಥಿತರಿದ್ದರು.

ಪೌಷ್ಠಿಕ ಆಹಾರದ ಮಹತ್ವ ಹಾಗೂ ಸ್ಥಳೀಯ ಆಹಾರ ಸಂಪನ್ಮೂಲ ಸಂಗ್ರಹಣೆ ಕುರಿತಾಗಿ ಜಯರಾಮ ಪೂಜಾರಿಯವರು ಹಾಗೂ ಆರೋಗ್ಯಕರ ಜೀವನ ಶೈಲಿ ಕುರಿತಾಗಿ ನಗರ ಆರೋಗ್ಯ ವೈದ್ಯಾಧಿಕಾರಿ ಡಾ. ಅಶ್ವಿನಿ ಯವರು ಮಾಹಿತಿ‌ ನೀಡಿದರು.

ತಾಲೂಕು ಶಿಶುಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್ ಸ್ವಾಗತಿಸಿದರು.  ಹಿರಿಯ ಮೇಲ್ಚಿಚಾರಕಿಯರಾದ ಶಾಲಿನಿ ಕಾರ್ಯಕ್ರಮ ನಿರ್ವಹಿಸಿದರು. ಗುಣವತಿ ವಂದಿಸಿದರು. ಪೋಷಣ್ ಅಭಿಯಾನದ ತಾಲೂಕು ಸಂಯೋಜಕಿ ಕು. ನವ್ಯ, ಮೇಲ್ವಿಚಾರಕಿಯರಾದ ನೀತಾ ಕುಮಾರಿ, ಶೋಭಾ ಎಂ., ಸುಜಾತ, ಲೀಲಾವತಿ, ಮುಬೀನಾ ಬಾನು, ಯಶೋಧ, ಕಚೇರಿ ಸಿಬ್ಬಂದಿಗಳಾದ ಯಶವಂತ್, ಗೌತಮ್, ಸುಂದರಿ ಸಹಕರಿಸಿದರು. ವಿವಿಧ ಅಂಗನವಾಡಿ ಕೇಂದ್ರಗಳ ಮೂಲಕ ನಡೆಸಲಾಗಿದ್ದ 52 ಪೌಷ್ಠಿಕ ಆಹಾರಗಳ ಪ್ರದರ್ಶನ ಹಾಗೂ ಸ್ಪರ್ಧೆ ನಡೆಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page