May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರೈತರ ಕನಸು ನನಸು ಮಾಡಿದ ಸರಕಾರ : ಕಂದಾಯ ಇಲಾಖೆಯಿಂದ ದರ್ಖಾಸ್ತು ಭೂಮಿಗೂ ಪೋಡಿ ಭಾಗ್ಯ: ಕೃಷಿ ಸಚಿವ ಕೃಷ್ಣ ಬೈರೇಗೌಡ ಇವರಿಂದ ಚಾಲನೆ

ಅಕ್ಟೋಬರ್ 01 : ದರ್ಖಾಸ್ತು ಜಮೀನು ಬಳಿಕ ಕೃಷಿ ಮಾಡುತ್ತಿರುವ ರೈತರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ರೈತರು ಕೃಷಿ ಕಾರ್ಯ ನಡೆಸುತ್ತಿರುವ ಸರ್ಕಾರಿ ಜಮೀನು, ದರ್ಖಾಸ್ತು ಭೂಮಿಗೂ ಪೋಡಿ ಭಾಗ್ಯ ನೀಡಲು ಕಂದಾಯ ಇಲಾಖೆ ಮುಂದಾಗಿದೆ. ಬಹು ಕಾಲದ ರೈತರ ಕನಸು ಸರಕಾರ ನನಸು ಮಾಡಿದೆ.

ಈ ಕಾರ್ಯಕ್ಕೆ ನಾಳೆ ಅಕ್ಟೋಬರ್ 2ರಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಇವರು ಹಾಸನ ಜಿಲ್ಲೆಯಲ್ಲಿ ಚಾಲನೆ ನೀಡಲಿದ್ದಾರೆ. ಪೋಡಿ ಭಾಗ್ಯ ಕಾರ್ಯಕ್ರಮದಿಂದ ದಶಕಗಳ ಹಿಂದೆ ಮಂಜೂರಾದ ಭೂಮಿ ಉಳುಮೆ ಮಾಡುತ್ತಿರುವ ಸುಮಾರು ಐದು ಲಕ್ಷ ರೈತರ ಸಂಕಷ್ಟ ನಿವಾರಣೆ ಆಗಲಿದೆ ಎಂದು ಅಂದಾಜಿಸಲಾಗಿದೆ.

ಸರ್ಕಾರಿ ಭೂಮಿಗಳ ಸಾಗುವಳಿ 59 ಸಾವಿರ ಸರ್ವೇ ನಂಬರ್‌ಗಳ ಪೋಡಿಗಾಗಿ ಅರ್ಹತಾ ಕಡತ ಸಿದ್ಧಪಡಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ದೊರೆತಿದ್ದು, ಅಂತಿಮ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.

ಮೊದಲ ಹಂತದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು, ತಹಶೀಲ್ದಾರ್ ಮೊದಲಾದ ಕಂದಾಯ ಅಧಿಕಾರಿಗಳು ಅಕ್ಟೋಬರ್ 1ರಿಂದ 5ರ ವರೆಗೆ ಅರ್ಹತಾ ಕಡತ ಸಿದ್ಧಪಡಿಸುತ್ತಾರೆ. ಆ ನಂತರ ಸರ್ವೇ ಕಾರ್ಯ ನಡೆದು, ಜಮೀನಿನ ಪೋಡಿ ಕಾರ್ಯ ನಡೆಸಲು ಕಂದಾಯ ಇಲಾಖೆ ಮುಂದಾಗಿದೆ.

ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸರ್ವೇ ಇಲಾಖೆಯ ಉಪ ನಿರ್ದೇಶಕರಿಗೆ ಈ ಕಾರ್ಯದ ಹೊಣೆಗಾರಿಕೆಯನ್ನು ನೀಡಲಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page