May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಣ್ಣ ಬೆರಗಿನ ಸಾಂಪ್ರದಾಯಿಕ ನೆಲೆಗಟ್ಟಿನ ಹಬ್ಬ – ಕರಮ್ ಉತ್ಸವ ಧಾರ್ಮಿಕ ಸಭೆಯಲ್ಲಿ ವಂದನೀಯ ಫಾದರ್ ಅಬ್ರಹಾಂ ಡಿಸೋಜ ಬಣ್ಣನೆ.

ಕರಮ್ ಹಬ್ಬವು ಬಣ್ಣ ಬೆರಗಿನ ಮತ್ತು ಸಾಂಪ್ರದಾಯಿಕ ನೆಲೆಗಟ್ಟು ಹೊಂದಿದ ಉತ್ಸವವಾಗಿತ್ತು ಎಂದು ಮುಲ್ಕಿಯ ಡಿವೈನ್ ಕಾಲ್ ರೆಟ್ರೀಟ್ ಸೆಂಟರ್ ನ ನಿರ್ದೇಶಕ ವಂದನೀಯ ಫಾದರ್ ಅಬ್ರಹಾಂ ಡಿಸೋಜ ಹೇಳಿದರು.

ಮಂಗಳೂರು ಮತ್ತು ಸುತ್ತಮುತ್ತಲಿನ 300 ಚೋಟಾ ನಾಗ್ಪುರ್ ವಲಸೆ ಆದಿವಾಸಿಗಳು ಮುಲ್ಕಿ ಕಾರ್ನಾಡು ಡಿವೈನ್ ಕಾಲ್ ರೆಟ್ರೀಟ್ ಸೆಂಟರ್ ನಲ್ಲಿ ಭಾನುವಾರ ತಮ್ಮ ಪಾರಂಪರಿಕ ಕರಮ್ ಹಬ್ಬವನ್ನು ನೃತ್ಯ, ಹಾಡು ಮತ್ತು ಆದಿವಾಸಿ ಸಂಪ್ರದಾಯಗಳೊಂದಿಗೆ ಆಚರಿಸಿದರು. ಮಂಗಳೂರು ಕೇಂದ್ರೀಕೃತಗೊಳಿಸಿ ವಿವಿಧ ಪ್ರದೇಶಗಳಲ್ಲಿ ಚೋಟಾ ನಾಗ್ಪುರ್ ಆದಿವಾಸಿ ವಲಸಿಗರು ಕಾರ್ಖಾನೆಗಳು, ಕೈಗಾರಿಕೆಗಳು, ಆಸ್ಪತ್ರೆಗಳು, ಕೃಷಿ ಮತ್ತು ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಚೋಟಾ ನಾಗ್ಪುರ್ ಪ್ರದೇಶದ ಆರ್ಥಿಕ ಕಠಿಣ ಪರಿಸ್ಥಿತಿಯಿಂದ ಜೀವನೋಪಾಯ ಹುಡುಕಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಲಸೆ ಬಂದು ಕುಟುಂಬಗಳೊಂದಿಗೆ ನೆಲೆಸಿದ್ದಾರೆ. ಅವರ ಮಕ್ಕಳು ವಿದ್ಯಾವಂತರಾಗಿದ್ದಾರೆ ಮತ್ತು ಉತ್ತಮ ಉದ್ಯೋಗದಲ್ಲಿದ್ದಾರೆ. ಈ ಕಾರ್ಯಕ್ರಮವು ಎಲ್ಲಾ ವಲಸೆ ಸಮುದಾಯಗಳಿಗೆ ಮಾನ್ಯತೆ, ಗೌರವ ಮತ್ತು ಶೃದ್ಧೆಯನ್ನು ನೀಡುತ್ತದೆ. ವಂದನೀಯ ಫಾದರ್ ಸುಶೀಲ್ ಮತ್ತಿತರೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅನೇಕ ಗಣ್ಯರು ಉಪಸ್ಥಿತರಿದ್ದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page