May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಲ ಖಾಸಗಿ ಶಾಲೆಗಳಿಗೆ ಮಧ್ಯಂತರ ರಜೆ ಇನ್ನೂ ನೀಡಿಲ್ಲ ಪೋಷಕರ ಆಕ್ರೋಶ

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್ 3ರ ಗುರುವಾರದಿಂದ ಶಾಲಾ ಮಕ್ಕಳಿಗೆ ಮಧ್ಯಂತರ ರಜೆ ಆರಂಭವಾಗಬೇಕಿದ್ದರೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲವು ಖಾಸಗಿ ಶಾಲೆಗಳು ಇನ್ನೂ ರಜೆ ನೀಡಿಲ್ಲ.

ಶಿಕ್ಷಣ ಇಲಾಖೆಯ ಶೈಕ್ಷಣಿಕ ವೇಳಾಪಟ್ಟಿ ಅನುಸಾರ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಶಿಕ್ಷಕರು ಬುಧವಾರ ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಮಧ್ಯಂತರ ರಜೆಯ ಮಾಹಿತಿ ನೀಡಿ ಕಳಹಿಸಲಾಗಿದೆ. ಆದರೆ, ಕೆಲವು ಖಾಸಗಿ ಶಾಲೆಗಳಲ್ಲಿ ಮಾತ್ರ ಇನ್ನೂ ರಜೆ ನೀಡಿಲ್ಲ.

ವೇಳಾಪಟ್ಟಿ ಪ್ರಕಾರ ಇಷ್ಟೊತ್ತಿಗೆ ಪೂರ್ಣಗೊಳಿಸಬೇಕಿದ್ದ ಅರ್ಧವಾರ್ಷಿಕ ಪರೀಕ್ಷೆಯನ್ನು ಇನ್ನೂ ನಡೆಸುತ್ತಿರುವ ಖಾಸಗಿ ಶಾಲೆಗಳು, ಮುಂದಿನ ವಾರದಿಂದ ತಮ್ಮ ಶಾಲೆಯ ಮಕ್ಕಳಿಗೆ ರಜೆ ನೀಡುವುದಾಗಿ ಹೇಳಿವೆ. ಇದು ಪೋಷಕರ ವಲಯದಲ್ಲಿ ಬಹಳ ಆಕ್ರೋಶಕ್ಕೆ ಕಾರಣವಾಗಿದೆ. ನಿಯಮ ಪ್ರಕಾರ ಅಕ್ಟೋಬರ್ 3ರಿಂದ 20ರವರೆಗೆ 18 ದಿನ ರಜೆ ನೀಡಬೇಕು.

ಆದರೆ, ಒಂದು ವಾರ ತಡ ಮಾಡಿದರೆ ಮಕ್ಕಳಿಗೆ ರಜೆ ಅವಧಿ ಕಡಿತವಾಗಲಿದೆ. ಶೈಕ್ಷಣಿಕ ವರ್ಷದ ಮಧ್ಯೆ ಕೆಲವು ದಿನ ಕುಟುಂಬದೊಂದಿಗೆ ಪೂರ್ಣಾವಧಿ ಕಾಲ ಕಳೆಯುವುದು, ಪ್ರವಾಸ, ಸಂಬಂಧಿಕರ ಮನೆಗೆ ಬೇಟಿ ಸೇರಿದಂತೆ ಮತ್ತಿತರೆ ಅವಕಾಶಗಳಿಗೆ ಸಮಯ ಸಿಗದಂತಾಗಲಿದೆ ಎಂಬುದು ಪೋಷಕರ ವಲಯದ ಅಸಮಾಧಾನವಾಗಿದೆ. ಶಿಕ್ಷಣ ಇಲಾಖೆ ಕೂಡಲೇ ಎಚ್ಚೆತ್ತುಕೊಳ್ಳಬೇಕಾಗಿ ಪೋಷಕರ ಮನವಿಯಾಗಿದೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page