July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಂಗೋಡು ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಕಾವ್ಯಾರಾಧನೆ ಸಂಭ್ರಮ  

ಕಾಸರಗೋಡು: ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಸುಬ್ರಹ್ಮಣ್ಯ ಕ್ಷೇತ್ರದ ಸಾಂಸ್ಕೃತಿಕ ಘಟಕ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯ, ವಿಜ್ಡಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್ ಹಾಗೂ ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಜಂಟಿ ಆಶ್ರಯದಲ್ಲಿ ಪಾಂಗೋಡು ಕ್ಷೇತ್ರದ ‘ಶ್ರೀ ದುರ್ಗಾಂಬಾ ವೇದಿಕೆ’ಯಲ್ಲಿ ಕನ್ನಡ ಭವನದ ಕೆ. ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್ ಸಾರಥ್ಯದಲ್ಲಿ ಕಾಸರಗೋಡು ದಸರಾ ಸಾಹಿತ್ಯ ಸಾಂಸ್ಕೃತಿಕೋತ್ಸವ-2024’ ನಡೆಯಿತು. ಕಾರ್ಯಕ್ರಮದಲ್ಲಿ ಕುಣಿತ ಭಜನೆ, ಭಜನೆ, ಸತ್ಸಂಗ ಹಾಗೂ ಶಾಂತಾ ಕುಂಟಿನಿ ಸಾರಥ್ಯದ ಉಪ್ಪಿನಂಗಡಿಯ ಸತ್ಯಶಾಂತ ಪ್ರತಿಷ್ಠಾನದ ಸದಸ್ಯರಿಂದ ‘ಗಾನಲಹರಿ’ ನಡೆಯಿತು. ಬಳಿಕ ನಡೆದ ಕಾಸರಗೋಡು ದಸರಾ ಕವಿಗೋಷ್ಟಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಕವಿ ವಿ.ಬಿ. ಕುಳಮರ್ವ ವಹಿಸಿದ್ದರು.

 ಅಡೂರಿನ ಶಿವಗಿರಿ ಸಾಹಿತ್ಯ ವೇದಿಕೆಯ ಸ್ಥಾಪಕ ಅಧ್ಯಕ್ಷ  ವಿರಾಜ್ ಅಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಲಲಿತಾಲಕ್ಷ್ಮೀ ಕುಳಮರ್ವ, ಕೆ.ಪಿ. ಪ್ರಕಾಶ್ಚಂದ್ರ, ಪ್ರಾಂಶುಪಾಲ ಕೆ.ಪಿ. ರಮೇಶ್ಚಂದ್ರ ಇದ್ದರು. ಕಾರ್ಯಕ್ರಮದಲ್ಲಿ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ ಸಮಿತಿಯಿಂದ ವಿ.ಬಿ. ಕುಳಮರ್ವ- ಲಲಿತಾಲಕ್ಷ್ಮೀ ಕುಳಮರ್ವ ದಂಪತಿಗೆ ‘ಕಾಸರಗೋಡು ದಸರಾ ಸನ್ಮಾನ’ ನಡೆಯಿತು. ನಾಡಿನ ಖ್ಯಾತ ಕವಿಗಳಾದ ಡಾ. ಕೆ.ಜಿ. ವೆಂಕಟೇಶ್ ಶಿವಮೊಗ್ಗ, ಡಾ. ಕೊಳಚಪ್ಪೆ ಗೋವಿಂದ ಭಟ್, ಪಿ.ವಿ. ಪ್ರದೀಪ್ ಕುಮಾರ್, ಮಂಗಳೂರು, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಲಕ್ಷ್ಮೀ ವಿ. ಭಟ್, ಜಯಾನಂದ ಪೆರಾಜೆ, ನಾಟಕ ಭಾರ್ಗವ ಕೆಂಪರಾಜು, ವಿರಾಜ್ ಅಡೂರು, ಸೀತಾಲಕ್ಷ್ಮಿ ವರ್ಮ ವಿಟ್ಲ, ಶಾಂತಾ ಪುತ್ತೂರು, ರತ್ನಾ ಕೆ. ಭಟ್ ತಲಂಜೇರಿ ಇವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ 2024’ ಪ್ರದಾನ ಮಾಡಲಾಯಿತು.

ಬಳಿಕ ನಡೆದ ಭಕ್ತಿಪ್ರಧಾನ ಕವಿಗೋಷ್ಟಿಯಲ್ಲಿ ಶ್ರೀಹರಿ ಭಟ್ ಪೆಲ್ತಾಜೆ, ರೇಖಾ ಸುದೇಶ್ ರಾವ್, ಅನ್ನಪೂರ್ಣ ಎನ್. ಕುತ್ತಾಜೆ,  ಕುಸುಮಾಕರ ಅಂಬೆಕಲ್ಲು, ರವೀಂದ್ರನ್ ಪಾಡಿ, ವಿದ್ಯಾ ರಕ್ಷಿತ್ ಪುತ್ತೂರು,  ರೇಖಾ ರೋಶನ್ ಮಲ್ಲಿಗೆಮಾಡು,  ಚಂಚಲಾಕ್ಷಿ ಶಾಮಪ್ರಕಾಶ್ ಕಾಸರಗೋಡು, ಮೇಘ ಶಿವರಾಜ್ ಬೀರಂತಬೈಲ್, ಅನಿತಾ ಶೆಣೈ,  ನಿರ್ಮಲಾ ಶೇಷಪ್ಪ ಕುಲಾಲ್ ಖಂಡಿಗೆ,  ಶುಭಾಷಿಣಿ ಚಂದ್ರ ಬೇಕೂರು, ಶಿವಾನಿ ಕೆ. ಪೈವಳಿಕೆ, ಪ್ರಿಯಾ ಬಾಯಾರು,  ಸುಜಿತ್ ಕುಮಾರ್ ಬೇಕೂರು, ಶಶಿಕಲಾ ಟೀಚರ್ ಕುಂಬಳೆ, ಹಿತೇಶ್ ಕುಮಾರ ನೀರ್ಚಾಲ್, ಗಿರೀಶ್ ಪಿ.ಎಂ. ಚಿತ್ತಾರಿ, ಸುಶೀಲಾ ಕೆ. ಪದ್ಯಾಣ, ಸಂಧ್ಯಾಗೀತಾ ಬಾಯಾರು, ಗಾಯತ್ರಿ ಪಳ್ಳತ್ತಡ್ಕ, ಗಿರೀಶ್ ಪೆರಿಯಡ್ಕ ಉಪ್ಪಿನಂಗಡಿ, ಶ್ವೇತಾ ಡಿ. ಬಂಟ್ವಾಳ ಭಾಗವಹಿಸಿವರು.

ಕಾಸರಗೋಡು ಜಿಲ್ಲೆಯ ಪದವಿ ಕಾಲೇಜಿನ ಆಯ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಭರವಸೆಯ ಬೆಳಕು 2024 ಗೌರವ ಪ್ರದಾನ ನಡೆಯಿತು. ವಿಜ್ಡಮ್ ಇನ್‌ಸ್ಟಿಟ್ಯೂಟ್ ನೆಟ್ವರ್ಕ್ ಮುಖ್ಯಸ್ಥ ಅಭಿಲಾಷ್ ಕ್ಷತ್ರಿಯ ಗೌರವ ಪ್ರದಾನ ಮಾಡಿದರು. ಕೆ. ವಾಮನ್ ರಾವ್ ಬೇಕಲ್ ಸ್ವಾಗತಿಸಿದರು. ವಸಂತ ಕೆರೆಮನೆ ವಂದಿಸಿದರು. ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page