May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಅಧ್ಯಕ್ಷರ ಮೇಲಿನ ಹಲ್ಲೆ ಪ್ರಕರಣ, ಬಾಕಿ ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಮಹಿಳಾ ಆಯೋಗ ಒತ್ತಾಯ

ಮಂಗಳೂರು : ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಜೆರೊಮ್ ಡಿಸೋಜ ಪಾನೀರ್ ಇವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ವಾಮಂಜೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದು ಬಾಕಿ ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಆಯೋಗದ ಕಾರ್ಯದರ್ಶಿ ಅನಿತಾ ಫ್ರಾಂಕ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಗುರುವಾರ ಭೇಟಿಯಾಗಿ ಲಿಖಿತ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಆಲ್ವಿನ್ ಡಿಸೋಜ ಅವರು ಅಕ್ಟೋಬರ್ 5ರಂದು ಪಾವೂರು ಉಳಿಯ ದ್ವೀಪ ಪರಿಸರದಲ್ಲಿ ಅಕ್ರಮ ಮರಳುಗಾರಿಕೆ ವೀಕ್ಷಣೆಗೆ ಪತ್ರಕರ್ತರೊಂದಿಗೆ ತೆರಳಿದ್ದಾಗ ಸುಮಾರು 20 ಜನರ ಗುಂಪು ಇವರ  ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು. ಈ ಘಟನೆಗೆ ಸಂಬಂಧಿಸಿ ಕಥೊಲಿಕ್ ಸಭಾ ಸಂಘಟನೆಯ ಮಾಜಿ ಅಧ್ಯಕ್ಷ ಪಾವ್ಲ್ ರೋಲ್ಫಿ ಡಿಕೋಸ್ತ ಇವರ ಮುಂದಾಳತ್ವದಲ್ಲಿ ಡಿಸಿಪಿ ಮತ್ತು ಎಸಿಪಿ ಮುಖಾಂತರ ಆರೋಪಿಗಳನ್ನು ಬಂಧಿಸುವಂತೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವರ್ತರಾದ ಮಂಗಳೂರು ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರ ಭೇಟಿ ಸಂದರ್ಭ ಉಷಾ ಫೆರ್ನಾಂಡಿಸ್, ಮರ್ಸಿ ಮಿನೇಜಸ್, ಐವಿ ಪಿಂಟೊ ಹಾಗೂ ಲಿನೆಟ್ ಕ್ಯಾಸ್ತೆಲಿನೊ ಉಪಸ್ಥಿತರಿದ್ದರು

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page