August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೇರಳಕಟ್ಟೆ ಸಮೀಪದ ಭಗವಂತ ಕೋಡಿಯಲ್ಲಿ ಒಂದೇ ದಿನ ಇಬ್ಬರು ಮರಣ

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಸಮೀಪದ ಭಗವಂತಕೋಡಿ ಎದುರು – ಬದುರು ಮನೆಯ ನಿವಾಸಿಗಳಿಬ್ಬರು ಅಕ್ಟೋಬರ್ 10ರಂದು ಗುರುವಾರ ಬೆಳಗ್ಗೆ ಒಂದೇ ದಿನ ನಿಧನರಾದರು.

ಅಬ್ದುರ್ರಹ್ಮಾನ್ ಮೇಸ್ತ್ರಿ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರೆ ಅವರ ಮೃತದೇಹವನ್ನು ನೋಡಿ ಸ್ವಗೃಕ್ಕೆ ಬಂದ  ಎದುರು ಮನೆಯ ಹನೀಫ್ ಸಾಹೇಬ್ (65) ಹೃದಯಾಘಾತದಿಂದ ನಿಧನ ಹೊಂದಿದರು.

ಅಬ್ದುರ್ರಹ್ಮಾನ್ ಮೇಸ್ತ್ರಿ ಅವರು ಮೂಲತಃ ವಿಟ್ಲ ಸಮೀಪದ ಒಕ್ಕೆತ್ತೂರು – ಕೊಡಂಗೆ ನಿವಾಸಿಯಾಗಿದ್ದು ಇತ್ತೀಚೆಗೆ ಭಗವಂತಕೋಡಿಯಲ್ಲಿ ಮನೆ ಖರೀದಿಸಿ ವಾಸವಾಗಿದ್ದರು. ಅವರ ಮೃತ ಶರೀರ ಇದೀಗ ಭಗವಂತಕೋಡಿಯಲ್ಲಿದ್ದು ಸಂಜೆಯ ಬಳಿಕ ಒಕ್ಕೆತ್ತೂರು – ಕೊಡಂಗೆ ಮಸೀದಿ ಬಳಿ ದಫನ ಕಾರ್ಯ ನೆರವೇರಿಸಲಾಗುವುದು ಎಂದು ಕುಟುಂಬಿಕರು ತಿಳಿಸಿದ್ದಾರೆ. ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಹನೀಫ್ ಸಾಹೇಬ್ ಅವರು ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

You may also like

News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ
News

ಸಂಚಾರ ನಿಯಮ ಉಲ್ಲಂಘನೆ – ಪುತ್ತೂರಿನಲ್ಲಿ ಗ್ಲಾಸ್ ಸ್ಟಿಕ್ಕರ್ ಅಳವಡಿಸಿದ ಹಾಗೂ ನಂಬರ್ ಪ್ಲೇಟ್ ಮರೆಮಾಚಿದ ವಾಹನಗಳಿಗೆ ಪೊಲೀಸರ ದಂಡ!

ಪುತ್ತೂರು: ವಾಹನಗಳ ಗ್ಲಾಸ್‌ಗಳಿಗೆ ದಟ್ಟವಾದ ಸ್ಟಿಕ್ಕರ್ ಅಳವಡಿಸಿ ಚಾಲನೆಗೆ ಅಡ್ಡಿಪಡಿಸುತ್ತಿದ್ದ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್‌ಗಳನ್ನು ಹಾಕಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ

You cannot copy content of this page