August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರುವಿನಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಸಾಹಿತ್ಯೋತ್ಸವ – ನೂರಾರು ಪ್ರತಿಭೆಗಳ ಕಲರವ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್, ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ವತಿಯಿಂದ “ನಿರೀಕ್ಷೆಗಳ ನೀಲ ನಕ್ಷೆ” ಎಂಬ ಸ್ಲೋಗನ್ ನೊಂದಿಗೆ ಸಾಹಿತ್ಯೋತ್ಸವ ಕಾರ್ಯಕ್ರಮವು ಇದೇ ಅಕ್ಟೋಬರ್ 20ರಂದು ಆದಿತ್ಯವಾರ ಸೂರಿಕುಮೇರು ಮಸೀದಿ ಬಳಿಯ ಆಟದ ಮೈದಾನದಲ್ಲಿ ನಡೆಯಲಿದೆ.

ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿ ದುಆ ನಡೆಸಿಕೊಡಲಿರುವರು. ಬಂಡಾಡಿ ಮುಹಮ್ಮದ್ ಹಾಜಿ ಸೂರಿಕುಮೇರು, ಪತ್ರಕರ್ತ ಲತೀಫ್ ನೇರಳಕಟ್ಟೆ ಧ್ವಜಾರೋಹಣ ಮಾಡಲಿರುವರು. ಬಳಿಕ ಮಾಣಿ ಸೆಕ್ಟರ್ ವ್ಯಾಪ್ತಿಯ ಪಾಟ್ರಕೋಡಿ, ಮಿತ್ತೂರು, ಸೂರ್ಯ, ನೇರಳಕಟ್ಟೆ, ಶೇರಾ, ಬುಡೋಳಿ, ಸೂರಿಕುಮೇರು ಯುನಿಟ್ ಗಳ ಪ್ರತಿಭೆಗಳ ಮಧ್ಯೆ ಸಾಹಿತ್ಯೋತ್ಸವ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

ಸಂಜೆ ನಡೆಯುವ ಸಮರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಉಲಮಾ ಉಮರಾ ಸಾಮಾಜಿಕ ನಾಯಕರುಗಳು, ಸೆಕ್ಟರ್, ಯುನಿಟ್ ಪ್ರತಿನಿಧಿಗಳು ಭಾಗವಹಿಸಲಿರುವರು. ಮರ್‌ಹೂಂ ಸರ್ಫ್ರಾಝ್ ನೆಲ್ಲಿ ನಗರ, ಮರ್‌ಹೂಂ ಅಬ್ಬಾಸ್ ಪಟ್ಲಕೋಡಿ ವೇದಿಕೆ, ಮರ್‌ಹೂಂ ಇರ್ಶಾದ್ ಉಮ್ಮರ್ ವೇದಿಕೆ, ಮರ್‌ಹೂಂ ಬಿನ್ಯಾಮಿನ್ ಝುಹ್ರಿ ವೇದಿಕೆ, ಮರ್‌ಹೂಂ ಅಬ್ದುಲ್ ರಝಾಕ್ ವೇದಿಕೆಗಳಲ್ಲಿ ಕಾರ್ಯಕ್ರಮ ಮತ್ತು ಸ್ಪರ್ಧೆಗಳು ನಡೆಯಲಿದೆ ಎಂದು ಸೆಕ್ಟರ್ ಅಧ್ಯಕ್ಷ ಸಾಬಿತ್ ಪಾಟ್ರಕೋಡಿ, ಕಾರ್ಯದರ್ಶಿ ಮುಬಶ್ಶಿರ್ ಸ‌ಅದಿ ಸೂರಿಕುಮೇರು, ಕೋಶಾಧಿಕಾರಿ ಇಮ್ರಾನ್ ಮಾಣಿ ಮತ್ತು ಸ್ವಾಗತ ಸಮಿತಿ ಚೇರ್ಮನ್ ಹನೀಫ್ ಸಂಕ, ಕನ್ವೀನರ್ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ, ಫೈನಾನ್ಸ್ ಸೆಕ್ರೆಟರಿ ಯೂಸುಫ್ ಹಾಜಿ, ಮಾಧ್ಯಮ ಕಾರ್ಯದರ್ಶಿ ಸಲೀಂ ಮಾಣಿ ಪ್ರಕಟಣೆಯಲ್ಲಿ ತಿಳಿಸಿದರು.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page