May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯದ ವಿವಿಧೆಡೆ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಪ್ರಾಮಾಣಿಕ ಸೇವೆ ನೀಡಿದ ಮಂಗಳೂರು ನಗರದ ದಕ್ಷ DCP (ಕ್ರೈಂ) ದಿನೇಶ್ ಕುಮಾರ್!

ರಾಜ್ಯದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನೂರಾರು ಪ್ರಕರಣಗಳನ್ನು ಪತ್ತೆ ಹಚ್ಚಿ ಧೀರ ಪೋಲೀಸ್ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾದ ದಿನೇಶ್ ಕುಮಾರ್ ಇವರನ್ನು ಸರಕಾರವು ಮಂಗಳೂರು ನಗರದ DCP (ಕ್ರೈಂ) ಆಗಿ ನೇಮಕಗೊಳಿಸಿ ಮಹತ್ತರ ಕೊಡುಗೆ ನೀಡಿದ್ದು ಅತ್ಯಂತ ಸಮಂಜಸವೆನ್ನಬೇಕು.

‌ಮೂಲತಃ ಕೊಡಗು ಜಿಲ್ಲೆಯ ಮಡಿಕೇರಿಯವರಾದ ದಿನೇಶ್ ಕುಮಾರ್ ಬೆಂಗಳೂರು, ಮೈಸೂರಿನ ಕೆ.ಆರ್. ನಗರ,  ಮಂಡ್ಯ, ಮೂಡಿಗೆರೆ, ಉಡುಪಿ, ಬೈಂದೂರು, ಬ್ರಹ್ಮಾವರ, ಮಲ್ಪೆ, ಕುಂದಾಪುರ, ಮಣಿಪಾಲ ಮತ್ತು ಮಡಿಕೇರಿ ಮೊದಲಾದೆಡೆಗಳಲ್ಲಿ ಎಸ್.ಐ.ಯಾಗಿಯೂ, ಇನ್ಸ್ ಪೆಕ್ಟರ್ ರಾಗಿಯೂ, ಡಿ.ವೈ.ಎಸ್.ಪಿ.ಯಾಗಿಯೂ ಅತ್ಯಂತ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ ಹೋದಲ್ಲೆಲ್ಲಾ ಶಾಂತಿ- ಸುವ್ಯವಸ್ಥೆಯನ್ನು ಕಾಪಾಡಿದ ಕೀರ್ತಿ ಇವರಿಗೆ ಸಲ್ಲಬೇಕು, ಈ ಸಮರ್ಥ ಅಧಿಕಾರಿಯ ಪ್ರಾಮಾಣಿಕ ಸೇವೆಯನ್ನು ಮನ್ನಿಸಿದ ಸರಕಾರ ಇವರು ಮಡಿಕೇರಿಯಲ್ಲಿ   ಡಿ.ವೈ.ಎಸ್.ಪಿ.ಯಾಗಿದ್ದಾಗ ಇವರನ್ನು ಭಡ್ತಿಗೊಳಿಸಿ ಮಂಗಳೂರು ನಗರದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಇನ್ನಷ್ಟು ವರ್ಧಿಸಲು ಇವರನ್ನು ಮಂಗಳೂರು ನಗರದ ಅಪರಾಧ ವಿಭಾಗದ DCP ಆಗಿ ಸರಕಾರವು ನೇಮಕಗೊಳಿಸಿದ್ದು ಅತ್ಯಂತ ಸಮಂಜಸವೆನ್ನಬೇಕು. DCP ದಿನೇಶ್ ಕುಮಾರ್ ಇವರಿಗೆ ಸರಕಾರ ಹಾಗೂ ಪೊಲೀಸ್ ಇಲಾಖೆ ಹಲವು ಬಾರಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡಿ ಗೌರವಿಸಿದ್ದು ಅಭಿಮಾನಪಡಬೇಕಾದ ವಿಚಾರ.

DCP ದಿನೇಶ್ ಕುಮಾರ್ ಸೇವೆ ಸಲ್ಲಿಸಿದ ಸ್ಥಳಗಳಲ್ಲಿ ಗಲಭೆಗಳಿಲ್ಲ, ಅನ್ಯಾಯ ಅನಾಚಾರಗಳಿಲ್ಲ‌, ಎಲ್ಲಿ ಕೋಮು ಗಲಭೆಯಾಗಿದೆಯೋ, ಎಲ್ಲಿ ದರೋಡೆಯಾಗಿದೆಯೋ ಅಲ್ಲಿಗೆ ತಕ್ಷಣ DCP ದಿನೇಶ್ ಕುಮಾರ್ ಇವರನ್ನು ಸರಕಾರ ನೇಮಕ ಮಾಡುವುದು ವಿಷೇಶತೆ. ಮೊನ್ನೆ ಮಂಗಳೂರು ನಗರದಲ್ಲಿ ಸಂಭವಿಸಿದ ಭೀಕರ ದರೋಡೆಯಂತಹ 3 ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ DCP ದಿನೇಶ್ ಕುಮಾರ್ ರವರ ಮಾರ್ಗದರ್ಶನವೂ ಇತ್ತು ಎಂಬುವುದು ಒಂದು ಚಾರಿತ್ರಿಕ ಸತ್ಯ. ಇದು ಅವರ ಕಾರ್ಯದಕ್ಷತೆಗೆ ಹಿಡಿದ ಕೈಗನ್ನಡಿಯಾಗಿದೆ. ಯಾವುದೇ ಆಡಂಬರಗಳಿಲ್ಲದೆ ಸಂಕಷ್ಟಕ್ಕೊಳಗಾದವರ ಪರವಾಗಿ ಸರಕಾರಕ್ಕೂ ನಾಡಿಗೂ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಅಪರಾಧ ವಿಭಾಗದ DCP ದಿನೇಶ್ ಕುಮಾರ್ ಪೋಲೀಸ್ ಇಲಾಖೆಗೊಂದು ವರದಾನವಾಗಿದ್ದಾರೆ. ಸರಕಾರವು ಅವರ ಪ್ರಾಮಾಣಿಕ ಸೇವೆಯನ್ನು ಮನ್ನಿಸಿ ಅವರನ್ನು ಮಂಗಳೂರು ನಗರದಲ್ಲೇ ಇನ್ನಷ್ಟು ಕಾಲ ಉಳಿಸಿಕೊಳ್ಳ ಬೇಕಾಗಿ ನಗರದ ಜನತೆ ಸರ್ಕಾರವನ್ನು ಹಾಗೂ ಇಲಾಖೆಯನ್ನು ಆಗ್ರಹಿ‌ಸುತ್ತಾರೆ.

  • ಶೇಖ್ ಇಸಾಕ್, ಸಂಪಾದಕರು – ಕಾಕೋ೯ಟಕ ಸಾಪ್ತಾಹಿಕ ಪತ್ರಿಕೆ

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page