July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಐಕ್ಯ ವೇದಿಕೆ ಕೊಡಾಜೆ ಇದರ ನೂತನ ಅಧ್ಯಕ್ಷರಾಗಿ ಫಾರೂಕ್ ಗೋಳಿಕಟ್ಟೆ ಆಯ್ಕೆ

ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯ ಐಕ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಫಾರೂಕ್ ಗೋಳಿಕಟ್ಟೆ ಆಯ್ಕೆಯಾದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ವೇದಿಕೆಯ 2024-25 ನೇ ಸಾಲಿನ  ನೂತನ ಸಮಿತಿ ರಚನಾ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಲತೀಫ್ ನೇರಳಕಟ್ಟೆ, ಗೌರವ ಸಲಹೆಗಾರರಾಗಿ ಗುಲ್ಜಾರ್ ರಝಾಕ್ ಅನಂತಾಡಿ ಅವರನ್ನು ಆರಿಸಲಾಯಿತು.

ಉಪಾಧ್ಯಕ್ಷರುಗಳಾಗಿ ಅಶ್ರಫ್ ಭಾರತ್ ಕಾರ್ಸ್, ರಫೀಕ್ ಎಸ್.ಎಸ್. ಕೊಡಾಜೆ, ಪ್ರಧಾನ ಕಾರ್ಯದರ್ಶಿ ಶರೀಫ್ ಅನಂತಾಡಿ, ಜೊತೆ ಕಾರ್ಯದರ್ಶಿಗಳಾಗಿ ಆದಂ ಎಸ್.ಎಂ.ಎಸ್., ಅಶ್ರಫ್ ನೇರಳಕಟ್ಟೆ, ಕೋಶಾಧಿಕಾರಿ ರಿಯಾಝ್ ನೇರಳಕಟ್ಟೆ, ಪತ್ರಿಕಾ ಕಾರ್ಯದರ್ಶಿಗಳಾಗಿ ನೌಫಳ್ ಕೊಡಾಜೆ, ಸಲೀಂ ಮಾಣಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಮನ್ಸೂರ್ ನೇರಳಕಟ್ಟೆ, ಇಮ್ತಿಯಾಜ್ ಕೊಡಾಜೆ, ರಫೀಕ್ ಪಂತಡ್ಕ, ಕ್ರೀಡಾ ಕಾರ್ಯದರ್ಶಿಗಳಾಗಿ ಫಾರೂಕ್ ಕೊಡಾಜೆ, ಹಫೀಝ್ ಭಗವಂತಕೋಡಿ, ಸಮ್ಮಾಸ್ ನೇರಳಕಟ್ಟೆ, ಆರೋಗ್ಯ ಕಾರ್ಯದರ್ಶಿಗಳಾಗಿ ಹನೀಫ್ ಪಂತಡ್ಕ, ಸಲೀಂ ಪರ್ಲೊಟ್ಟು, ಯೂಸುಫ್ ಕೊಡಾಜೆ, ಶೈಕ್ಷಣಿಕ ಕಾರ್ಯದರ್ಶಿಗಳಾಗಿ ಮಸೂದ್ ಎಸ್.ಎಸ್. ಕೊಡಾಜೆ, ಮಜೀದ್ ಅನಂತಾಡಿ, ಮುಸ್ತಫಾ ಪಂತಡ್ಕ ಹಾಗೂ ಸಾಮಾಜಿಕ ಕಾರ್ಯದರ್ಶಿಗಳಾಗಿ ಫಾರೂಕ್ ಪಂತಡ್ಕ, ಅಬೂಬಕ್ಕರ್ (ಅಬ್ಬು) ಪಂತಡ್ಕ ಅವರು ಆಯ್ಕೆಯಾದರು. ನೂತನ ಕಾರ್ಯದರ್ಶಿ ಶರೀಫ್ ಅನಂತಾಡಿ ಸ್ವಾಗತಿಸಿ, ವಂದಿಸಿದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page