July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾರಾಯಣಗುರುಗಳು ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮೌನಕ್ರಾಂತಿಯ ಹರಿಕಾರರು : ದಿನೇಶ್ ಸುವರ್ಣ ರಾಯಿ

ಬಂಟ್ವಾಳ: ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಬಂಟ್ಟಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು.

ಅವರು ಅಕ್ಟೋಬರ್ 25ರಂದು ಬಂಟ್ವಾಳದ ಯಶೋಧರ ಪೂಜಾರಿ ಕಡಂಬಲ್ಕೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 17ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ಪ್ರಥಮ ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ನಿರ್ದೇಶಕರಾದ ಮಧುಸೂದನ್ ಮಧ್ವ ಮತ್ತು ಮಹೇಶ್ ಬೊಳ್ಳಾಯಿ, ನಿಕಟಪೂರ್ವ ಅಧ್ಯಕ್ಷ ಹರೀಶ್ ಕುದನೆ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ., ಅರುಣ್ ಬಿ.ಸಿ. ರೋಡ್, ಸದಸ್ಯರಾದ ಯತೀಶ್ ಬೊಳ್ಳಾಯಿ, ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಜಗದೀಶ್ ಕಲ್ಲಡ್ಕ, ಸುನಿತಾ ನಿತಿನ್ ಮಾರ್ನಬೈಲ್, ಹರೀಶ್ ಅಜೆಕಲಾ, ಶೈಲಜಾ ಹರೀಶ್ ಉಪಸ್ಥಿತರಿದ್ದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page