July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ ಭಾರತ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಲ್ಲಿ: ಅಕ್ಟೋಬರ್ 29ರಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ತನ್ನ ಸರಕಾರದ ಮುಂಚೂಣಿ ಆರೋಗ್ಯ ವಿಮೆ ಕಾರ್ಯಕ್ರಮ ಆಯುಷ್ಮಾನ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗಾಗಿ ವಿಸ್ತರಿಸಿದರು. ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 70 ವರ್ಷ ಮೇಲ್ಪಟ್ಟವರು ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು ‘ಆಯುಷ್ಮಾನ ವಯ ವಂದನಾ ಕಾರ್ಡ್‌’ನ್ನು ಹೊಂದಿರುವುದು ಅಗತ್ಯವಾಗಿದೆ ಎಂದು ತಿಳಿಸಿದರು.


ಆದರೆ ದಿಲ್ಲಿ ಮತ್ತು ಪಶ್ಚಿಮ ಬಂಗಾಳಗಳಲ್ಲಿಯ 70 ವರ್ಷ ಮೇಲ್ಪಟ್ಟವರು ಈ ಯೋಜನೆಯ ಲಾಭಗಳನ್ನು ಪಡೆಯಲು ಸಾಧ್ಯವಿಲ್ಲ. ಏಕೆಂದರೆ ಅವರ ಸರಕಾರಗಳು ‘ರಾಜಕೀಯ ಕಾರಣಗಳಿಂದಾಗಿ’ ಅದನ್ನು ಜಾರಿಗೊಳಿಸುತ್ತಿಲ್ಲ ಎಂದು ಮೋದಿ ಹೇಳಿದರು.

ಈ ರಾಷ್ಟ್ರೀಯ ಆರೋಗ್ಯ ವಿಮೆ ಯೋಜನೆಯು ಆಸ್ಪತ್ರೆ ವೆಚ್ಚಗಳಿಗಾಗಿ ವಾರ್ಷಿಕ 5 ಲಕ್ಷ ರೂಪಯಿಗಳ ನೆರವನ್ನು ಒದಗಿಸುತ್ತದೆ, ಆದರೆ ವಿಷಾದನೀಯವಾಗಿ ನಿಮ್ಮ ರಾಜ್ಯಗಳಲ್ಲಿ ರಾಜಕೀಯ ಹಿತಾಸಕ್ತಿಗಳು ಈ ಯೋಜನೆಯ ಅನುಷ್ಠಾನಕ್ಕೆ ಅಡ್ಡಿಯನ್ನುಂಟು ಮಾಡಿವೆ ಎಂದು ದಿಲ್ಲಿ ಮತ್ತು ಪಶ್ಚಿಮ ಬಂಗಾಳದ ಜನತೆಯನ್ನು ಪ್ರಸ್ತಾವಿಸಿ ಮೋದಿ ಹೇಳಿದರು. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿಯವರು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 12,850 ಕೋಟಿ ರೂಪಾಯಿ ವೆಚ್ಚದ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದರು, ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page