August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಂಬೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ

ಬಂಟ್ವಾಳ ತಾಲೂಕಿನ ತುಂಬೆಯ ಶ್ರೀ‌ ಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ನುಗ್ಗಿದ  ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ನವಂಬರ್ 5ರಂದು ಮಂಗಳವಾರ ಮುಂಜಾನೆ ವೇಳೆಗೆ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

    ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದೂವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣ, ಗೊದ್ರೇಜ್, ಕ್ಯಾಸ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ. ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ‌. ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿ‌.ಆರ್. ನ್ನು ಕೂಡ ಬಿಡದೆ ಎಗರಿಸಿದ್ದಾರೆ.

ಇಂದು ಬೆಳಿಗ್ಗೆ ದೇವಸ್ಥಾನದ ಸಿಬ್ಬಂದಿಯೊರ್ವರು 6 ಗಂಟೆಗೆ ಬಂದಾಗ ಮುಂಬಾಗಿಲು ಚಿಲಕ ಮುರಿದಿದ್ದು ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ದೇವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆಯವರಿಗೆ ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

You may also like

News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ”
News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ

You cannot copy content of this page