May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಾಯಿ-ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ

ಮಂಗಳೂರು ನವಂಬರ್ 13:  ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ “ಕಿಲ್ಕಾರಿ” ಮೊಬೈಲ್ ಕರೆ ಆರಂಭಿಸಲಾಗಿದೆ ಎಂದು ರಾಜ್ಯ ಕಿಲ್ಕಾರಿ ಸಂಯೋಜಕಿ ಡಾ|| ಅಶ್ವಿನಿ ತಿಳಿಸಿದ್ದಾರೆ. ಕಿಲ್ಕಾರಿಯು ಗರ್ಭಿಣಿಯರು, ತಾಯಂದಿರು ಮತ್ತು ಅವರ ಕುಟುಂಬಗಳಿಗೆ ಸಂತಾನೋತ್ಪತ್ತಿ, ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಕಾಲಿಕ, ನಿಖರವಾದ ಮತ್ತು ಸಂಬಂಧಿತ ಮಾಹಿತಿಯನ್ನು ಒದಗಿಸುವ ಮೊಬೈಲ್ ಆರೋಗ್ಯ ಶಿಕ್ಷಣ ಸೇವೆಯಾಗಿದೆ.


ಈ ಕಾರ್ಯಕ್ರಮವನ್ನು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MoHFW) ಸಹಭಾಗಿತ್ವದಲ್ಲಿ ಕಾರ್ಯಗತಗೊಳಿಸಲಾಗಿದೆ, ಕುಟುಂಬಗಳ ಆರೋಗ್ಯ ಜ್ಞಾನವನ್ನು ಸುಧಾರಿಸಲು ಮತ್ತು ಜೀವ ಉಳಿಸುವ, ಆರೋಗ್ಯಕರ ಅಭ್ಯಾಸಗಳನ್ನು ತಿಳಿಸುವ ಗುರಿಯನ್ನು ಹೊಂದಿದೆ. ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮದಡಿಯಲ್ಲಿ RCH ಪೋರ್ಟರ್ ನಲ್ಲಿ ದಾಖಲಾಗಿರುವ ಗರ್ಭಿಣಿಯರಿಗೆ ಕುಟುಂಬಗಳ ಮೊಬೈಲ್ ಫೋನ್ ಗಳಿಗೆ ನೇರವಾಗಿ ಸಮಯ-ಸೂಕ್ಷ್ಮ ಆಡಿಯೊ ಮಾಹಿತಿಯನ್ನು ತಲುಪಿಸಲು ಕಿಲ್ಕಾರಿ ಪ್ರಸ್ತುತ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ (IVR) ತಂತ್ರಜ್ಞಾನವನ್ನು ಬಳಸಲಾಗಿದೆ. ಗರ್ಭಧಾರಣೆಯಾದ ಎರಡನೇ ತ್ರೈಮಾಸಿಕದಿಂದ ಮಗುವಿಗೆ ಒಂದು ವರ್ಷದವರೆಗೆ (72 ವಾರಗಳು) ತಾಯಿ ಮತ್ತು ಮಗುವಿನ ಸಾವುಗಳು ಸಂಭವಿಸುವುದನ್ನು ತಪ್ಪಿಸಲು ನಿರ್ಣಾಯಕ ಅವಧಿಯನ್ನು ಕರೆಗಳು ಒಳಗೊಳ್ಳುತ್ತವೆ.


ಕಿಲ್ಕಾರಿ ಕಾರ್ಯಕ್ರಮದಡಿ ಆರ್.ಸಿ. ಹೆಚ್ ಪೋರ್ಟಲ್‍ನಲ್ಲಿ ನೋಂದಾಯಿಸಿದ ಗರ್ಭಿಣಿ ಅಥವಾ ಕುಟುಂಬದ ಸದಸ್ಯರ ಮೊಬೈಲ್ ಸಂಖ್ಯೆಗೆ ಪ್ರತಿವಾರ ಕರೆ ಮಾಡುವ ಮೂಲಕ ಕಾಳಜಿ ವಹಿಸಲಾಗುವುದು.  ಮೊಬೈಲ್ ಸಂಖ್ಯೆ 0124-4451600 ರ ಮೂಲಕ ಸಂಪರ್ಕಿಸಿ ಪಾಲಕರೊಂದಿಗೆ ಮಾತನಾಡಲಾಗುವುದು. ಕುಟುಂಬದ ಸದಸ್ಯರು ತಾಯಿ ಮಗುವಿನ ಸುಸ್ಥಿರ ಆರೋಗ್ಯಕ್ಕಾಗಿ ಸಹಕರಿಸಬೇಕು. ಒಂದು ವೇಳೆ ಕರೆ ಸ್ವೀಕರಿಸಲು ಅಸಾಧ್ಯವಾದಲ್ಲಿ ಪುನಃ ಆರೋಗ್ಯ ಮಾಹಿತಿ ಪಡೆಯಲು Inbox number 14423 ಗೆ ಕರೆ ಮಾಡಬಹುದು.


ಗರ್ಭಿಣಿ ಎಂದು ತಿಳಿದ ದಿನದಿಂದಲೇ ಆರೋಗ್ಯ ಇಲಾಖೆ ಮೂಲಕ ತಾಯಿ ಕಾರ್ಡ್ ವಿತರಣೆ, ಟಿಡಿ ಚುಚ್ಚುಮದ್ದು ನೀಡುವಿಕೆ, ರಕ್ತ ಹೀನತ ತಡೆಗೆ ಕನಿಷ್ಠ 180 ಕಬ್ಬಿಣಾಂಶ ಮಾತ್ರೆಗಳ ವಿತರಣೆ, ಪ್ರತಿ ತಿಂಗಳು ವೈದ್ಯರಿಂದ ತಪಾಸಣೆ ರಕ್ತಪರೀಕ್ಷೆ ಹುಟ್ಟಿನಿಂದ ಒಂದು ವರ್ಷದೊಳಗಿನ ಮಕ್ಕಳಿಗೆ ನೀಡಬೇಕಾದ ಲಸಿಕೆ ಕುರಿತು ಪಾಲಕರಿಗೆ ಮನನ ಮಾಡುವ ಮಹತ್ವಪೂರ್ಣ ಕಾರ್ಯಕ್ರಮ ಇದಾಗಿದೆ.
ಜಿಲ್ಲೆಯಲ್ಲಿ  ಪ್ರತಿ ತಿಂಗಳ 9 ಮತು 24 ತಾರೀಖಿನಂದು ಎಲ್ಲಾ ಗರ್ಭಿಣಿಯರ ತಪಾಸಣೆಯನ್ನು ಮಾಡಲಾಗುತ್ತಿದ್ದು, ಎಲ್ಲಾ ಮಾಹಿತಿಯನ್ನು ಪೋನ್ ಮೂಲಕ ಪಾಲಕರಿಗೆ ಮಾಹಿತಿ ವಿನಿಮಯ ಮಾಡುವ ಮೂಲಕ ಮಗುವಿನ ಆರೋಗ್ಯದ ಕಾಳಜಿ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page