May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ವಾರ್ಷಿಕೋತ್ಸವ ಪೂರ್ವ ಸಿದ್ಧತಾ ಸಭೆ

ಪುತ್ತೂರು ಬೊಳುವಾರಿನ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ 56ನೇ ವಾರ್ಷಿಕೋತ್ಸವ ಮತ್ತು ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ವರ್ಷಾಚರಣೆಯನ್ನು ವಿಶಿಷ್ಟವಾಗಿ, ಅರ್ಥಪೂರ್ಣವಾಗಿ ಆಚರಿಸಲು ಪೂರ್ವ ಸಿದ್ಧತಾ ಸಭೆಯು ಪರ್ಲಡ್ಕ ಅಗಸ್ತ್ಯ ನಿವಾಸದಲ್ಲಿ ಜರಗಿತು. ಯಕ್ಷಗಾನ ಸಂಘದ   ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆ ವಹಿಸಿದ್ದರು.

ತಾಳಮದ್ದಳೆಯಾಗಿ ಉಭಯಸಂಘದ ಸದಸ್ಯರಿಂದ ಋಷಿ ಪತ್ನಿಯರ ಸಂವಾದ ಸರಣಿ, ಹಿರಿಯ ಕಲಾವಿದರ ತಾಳಮದ್ದಳೆ, ಸಭಾ ಕಾರ್ಯಕ್ರಮದಲ್ಲಿ ಗಣ್ಯರ ಸಮ್ಮುಖದಲ್ಲಿ  ಸಾಧಕರಿಗೆ ಯಕ್ಷಾಆಂಜನೇಯ ಪ್ರಶಸ್ತಿ, ಮಹಿಳಾ ಭಾಗವತರಿಗೆ ವಿಂಶತಿ ಪ್ರಶಸ್ತಿ ಮತ್ತು ವಿಶೇಷ ಸಾಧಕ ಕಲಾವಿದರೊಬ್ಬರಿಗೆ ಬೆಂಗಳೂರಿನ ಜಸ್ಟಿಸ್. ಜಗನ್ನಾಥ ಶೆಟ್ಟಿ ಮೆಮೊರಿಯಲ್  ಪ್ರಶಸ್ತಿ  ಪ್ರದಾನ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯದರ್ಶಿ ಆನಂದ ಸವಣೂರು ಸಹಕಾರ್ಯದರ್ಶಿ ಅಚ್ಯುತ್ತ ಪಾಂಗಣ್ಣಾಯ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ,ದುಗ್ಗಪ್ಪ ಎನ್,ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಗುಂಡ್ಯಡ್ಕ ಈಶ್ವರ ಭಟ್, ಗುಡ್ಡಪ್ಪ ಬಲ್ಯ,ಕಿಶೋರಿ ದುಗ್ಗಪ್ಪ, ಹರಿಣಾಕ್ಷಿ ಜೆ ಶೆಟ್ಟಿ,ಪ್ರೇಮಲತಾ ರಾವ್,ಮಾ. ಪರೀಕ್ಷಿತ್ ಭಾಗವಹಿಸಿ ಸೂಕ್ತ ಸಲಹೆಗಳನ್ನು ನೀಡಿದರು. ಭಾರತಿ ರೈ ಅರಿಯಡ್ಕ ಪ್ರಾರ್ಥಿಸಿದರು. ರಂಗನಾಥ ರಾವ್ ಬೊಳುವಾರು ಸ್ವಾಗತಿಸಿ ಗುಡ್ಡಪ್ಪ ಬಲ್ಯ ವಂದಿಸಿದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page