August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಮಣ್ಣಾಗುಡ್ಡೆಯ ಶ್ರೀ ಮಡಕೈ ನವದುರ್ಗಾ ಮಹಾಗಣಪತಿ ಕ್ಷೇತ್ರಕ್ಕೆ ಶ್ರೀ ವಿದ್ಯಾಧಿಶ ತೀರ್ಥ ಶ್ರೀಪಾದರ ಭೇಟಿ

ಮಂಗಳೂರಿನ ಮಣ್ಣಾಗುಡ್ಡೆಯ ಶ್ರೀ ಮಡಕೈ ನವದುರ್ಗಾ ಮಹಾಗಣಪತಿ ಕ್ಷೇತ್ರಕ್ಕೆ ನವಂಬರ್ 14ರಂದು ಸಂಜೆ 6:30ಕ್ಕೆ ಶ್ರೀ ಪರ್ಥಗಾಳಿ ಗೋಕರ್ಣ ಮಠಾಧೀಶರಾದ ಶ್ರೀ ವಿದ್ಯಾಧಿಶ ತೀರ್ಥ ಶ್ರೀಪಾದರು ಭೇಟಿ ನೀಡಿ, ಭಕ್ತಾದಿಗಳಿಗೆ ಪ್ರಸಾದ ವಿತರಿಸಿದರು. ಆ ಪ್ರಯುಕ್ತ ದೇವಾಲಯದ ಪರವಾಗಿ ನವದುರ್ಗಾ ಮಹಿಳಾ ಮಂಡಳಿಯ ಸದಸ್ಯರಿಂದ ಪೂರ್ಣಕುಂಭ, ವೇದಘೋಷ, ವಾದ್ಯ ಗೋಷ್ಟಿಗಳೊಂದಿಗೆ ಶ್ರೀ ಯುತರನ್ನು ಸ್ವಾಗತಿಸಲಾಯಿತು.

ದೇವರಭೇಟಿ, ಮಂಗಳಾರತಿ, ಸಭಾಕಾರ್ಯಕ್ರಮ ಹಾಗೂ ಶ್ರೀಗಳಿಗೆ ದೇವಾಲಯದ ವತಿಯಿಂದ ಪಾದಪೂಜೆ ಜರುಗಿತು. ಸ್ವಾಮೀಜಿಯವರಿಂದ ಆಶೀರ್ವಾಚನ, ಬಂದಂತಹ ಭಕ್ತಭಿಮಾನಿಗಳಿಗೆ ಫಲಮಂತ್ರಕ್ಷತೆ ವಿತರಣಾ ಕಾರ್ಯಕ್ರಮ ಜರುಗಿತು.

 

ದೇವಸ್ಥಾನದ ಆಡಳಿತ ಮೊಕ್ತೇಸರ ವಿಶ್ವನಾಥ್ ಭಟ್ ರವರು ಸ್ವಾಗತಿಸಿದರು. ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಸದಸ್ಯರಾದ ಸಮರ್ಥ್ ಭಟ್, ನವೀನ್ ಲೋಬೊ, ನವದುರ್ಗಾ ಮಹಿಳಾ ಮಂಡಳಿಯ ಸದಸ್ಯರು ಹಾಗೂ ನೂರಾರು ಮಂದಿ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನ ಪ್ರಧಾನ ಅರ್ಚಕರಾದ ಶ್ರೀ ಸತೀಶ್ ಭಟ್ ಇವರು ಪ್ರಾಸ್ತವಿಕ ಭಾಷಣವನ್ನು ಮಾಡಿದರು. ಧನ್ಯವಾದ ಸಮರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page