August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಾಳ್ತಿಲ, ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾವನ ಉದ್ಘಾಟನೆ

ಬಂಟ್ವಾಳ : ಬಾಳ್ತಿಲ, ಕುದ್ರೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಗ್ರಂಥಾಲಯ ಕೊಠಡಿ ಮತ್ತು ಅಂಗನವಾಡಿ ಕೇಂದ್ರದ ಆಟಿಕಾವನ ವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಇವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶೈಕ್ಷಣಿಕ ಮನೋಭಾವವನ್ನು ಮೂಡಿಸುವ ಪ್ರಾರಂಭಿಕ ಹಂತವೇ ಅಂಗನವಾಡಿಯಾಗಿದೆ. ಇಲ್ಲಿ ಆಟ, ಪಾಠದ ಜೊತೆಗೆ ಸಂಸ್ಕಾರದ ಜೀವನಕ್ಕೆ ಮೂಲ ತಳಹದಿ ಎಂದ ಅವರು ಈ ನಿಟ್ಟಿನಲ್ಲಿ ಪರಿಪೂರ್ಣ ವ್ಯವಸ್ಥೆಯನ್ನು ಕಲ್ಪಿಸಲು ಇಲಾಖೆ ಜೊತೆ ಸಹಕಾರ ನೀಡಿದ ಕಂಪೆನಿ ಹಾಗೂ ಗ್ರಾಮದ ಸರ್ವರಿಗೂ ಅಭಿನಂದನೆ ಸಲ್ಲಬೇಕು ಎಂದರು.

ಬಾಳ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಂಜಿನಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಮಾತನಾಡಿದರು. ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಆರ್. ಚೆನ್ನಪ್ಪ ಕೋಟ್ಯಾನ್, ಎಂ.ಆರ್.ಪಿ.ಎಲ್. ನ ವಿಕ್ರಮ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠಲ್ ನಾಯ್ಕ್, ಲೀಲಾವತಿ, ಲತೀಶ್,  ದೇವಿಕಾ, ಉಷಾ, ಸುಂದರ ಸಾಲಿಯಾನ್, ಮಮತಾ, ಮೋಹನ್ ಪ್ರಭು, ಸುರೇಖಾ, ಸುಜಾತ, ಶಿವರಾಜ್ ಮತ್ತಿತರರು ಉಪಸ್ಥಿತರಿದ್ದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page