May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಹಾಗೂ ಮಾಸಿಕ ಸಭೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ  ಸದಸ್ಯರು ಬಂಟ್ವಾಳ ತಾಲೂಕಿನ ವಗ್ಗದ ದೊಂಪದ ಪಲಿಕೆಯಿಂದ ಕಾಡಬೆಟ್ಟು ಅಂತರಂಗಡಿ ತನಕ ಸುಮಾರು ಒಂದುವರೆ ಕಿಲೋಮೀಟರ್ ರಸ್ತೆ ಬದಿ ಬೆಲೆದ ಬಲ್ಲೆ, ಹುಲ್ಲು, ಗಿಡ ಗಂಟೆಗಳನ್ನು  ಕಡಿದು  ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಮಾಡಿದರು.

ಈ ಶ್ರಮದಾನ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಪ್ರಮೋದ್ ಕುಮಾರ್ ರೈ ಶ್ರಮದಾನದ ಸಂದರ್ಭ ಭಾಗವಹಿಸಿ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹಿಸಿದರು.

ಶ್ರಮಧಾನ ಕಾರ್ಯದಲ್ಲಿ ಶೌರ್ಯ ಘಟಕ ಕಾಡಬೆಟ್ಟು ವಗ್ಗದ ಸಂಯೋಜಕಿ ರೇಖಾ ಪಿ., ಘಟಕ ಪ್ರತಿನಿಧಿ ಪ್ರವೀಣ್, ಸದಸ್ಯರುಗಳಾದ ಸಂಪತ್ ಶೆಟ್ಟಿ, ಮಹಾಬಲ ರೈ, ನಾರಾಯಣ್ ಪೂಜಾರಿ, ನಾರಾಯಣ್ ಶೆಟ್ಟಿ, ಲಕ್ಷ್ಮಣ್, ಆನಂದ, ಮೋಹನಂದ, ರೋಹಿತ್, ಪವನ್, ಜನಾರ್ಧನ, ಅಶೋಕ, ರಮೇಶ, ಪ್ರಮೀಳಾ, ಪ್ರಿಯಾಂಕ, ಶಶಿಕಲಾ, ಪವಿತ್ರ ಮಧ್ವ, ಭಾಗವಹಿಸಿದ್ದರು. ಶ್ರಮಧಾನ ಕಾರ್ಯಕ್ರಮದ ಬಳಿಕ ತಂಡದ ಮಾಸಿಕ ಸಭೆಯನ್ನು ನಡೆಸಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page