August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೋಳಿಯಾರು ಕಾಂಪಾಡಿಯಲ್ಲಿ ಅನ್ಯ ಕೋಮಿನ ಯುವಕನಿಂದ ಮಾನಭಂಗಕ್ಕೆ ಯತ್ನ – ಆರೋಪಿ ಬಂಧನ

 ಸ್ಥಳಕ್ಕೆ ಧಾವಿಸಿ ಬಂದ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ಬೋಳಿಯಾರು ಗ್ರಾಮದ ಕಾಂಪಾಡಿ ಎಂಬಲ್ಲಿ ಕ್ರೈಸ್ತ ಯುವತಿಯೊಬ್ಬಳು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಹೋಗುವ ಸಮಯದಲ್ಲಿ ಅನ್ಯಕೋಮಿನ ಯುವಕನೊಬ್ಬ ತನ್ನ ದ್ವಿಚಕ್ರ ವಾಹನದಲ್ಲಿ ಬಂದು ಮಾನಭಂಗಕ್ಕೆ ಯತ್ನಿಸಿದ ಘಟನೆ ನವಂಬರ್ 20ರಂದು ನಡೆದಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವತಿಯು ಸ್ಥಳೀಯ ಕಥೊಲಿಕ್ ಸಭಾ ಸಂಘಟನೆಗೆ ತಿಳಿಸಿದಾಗ, ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರು ವಲಯ ಅಧ್ಯಕ್ಷ ಡೋಲ್ಫಿ ಡಿಸೋಜ, ಅಮ್ಮೆಂಬಳ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಬರ್ಟ್ ಡಿಸೊಜ ಮತ್ತು ಕಥೊಲಿಕ್ ಸಭಾದ ನೂರಾರು ಸದಸ್ಯರೊಂದಿಗೆ ದಿಢೀರನೆ ಭೇಟಿ ನೀಡಿ ಪರಿಸ್ಥಿತಿಯನ್ನು ಶಾಂತಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page