August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ರಮ ದಾಸ್ತಾನು ಮಾಡಿದ ಮಧ್ಯವನ್ನು ವಶಪಡಿಸಿದ ಅಬಕಾರಿ ಇಲಾಖೆ

ನವಂಬರ್ 16ರಂದು ಶನಿವಾರ ಮದ್ಯರಾತ್ರಿ ಮಾನ್ಯ ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ, ಮಂಗಳೂರು ವಿಭಾಗರವರ ಆದೇಶದಂತೆ, ಅಬಕಾರಿ ಉಪ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲೆ ಇವರ ನಿರ್ದೇಶನದಂತೆ ಅಬಕಾರಿ ಉಪ ಅಧೀಕ್ಷಕರು ಮಂಗಳೂರು ಉಪ ವಿಭಾಗ 1 ಇವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರು, ಮಂಗಳೂರು ಉಪ ವಿಭಾಗ-1, ಅಬಕಾರಿ ಉಪ ನಿರೀಕ್ಷಕರು, ಮಂಗಳೂರು ದಕ್ಷಿಣ ವಲಯ-1, ಅಬಕಾರಿ ಉಪ ನಿರೀಕ್ಷಕರು ಮಂಗಳೂರು ಉಪವಿಭಾಗ 1 ಮತ್ತು ಸಿಬ್ಬಂದಿಯವರೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲಬೈಲ್ ಗ್ರಾಮದ ಕಂಬಳಕ್ರಾಸ್ ಬಳಿಯಲ್ಲಿರುವ ಎಸ್.ಎಸ್. ಕಾಂಪೌಂಡ್ ಕಟ್ಟಡದ ಮೊದಲನೆ ಮಹಡಿಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿರುದ್ದವಾಗಿ 1)ಡಿಫೆನ್ಸ್ ಮದ್ಯ- 19.5 litres, 2) ಗೋವಾ ರಾಜ್ಯದ ಮದ್ಯ- 52.5 litres, 3) ಕರ್ನಾಟಕ ರಾಜ್ಯದ ಮದ್ಯ- 3 litres, 4) ತೆರಿಗೆರಹಿತ ವಿದೇಶ ಮದ್ಯ – 3 litres, 5) ಗೋವಾ ರಾಜ್ಯದ ಬಿಯರ – 21.5 litres, 6) ಕರ್ನಾಟಕ ರಾಜ್ಯದ ಬಿಯರ್-0.33 litres, 7) ಡಿಫೆನ್ಸ ಬಿಯರ್- 1.3 litres, ಒಟ್ಟು: 101.30 litres (IML+BEER) ಯಾವುದೇ ದಾಖಲಾತಿಗಳಿಲ್ಲದೆ ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಮಾಡಿದ್ದ ಮಧ್ಯವನ್ನು ವಶಪಡಿಸಿಕೊಂಡಿದ್ದು, ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 14, 15ರಂತೆ ಅಪರಾಧವಾಗಿದ್ದು ಕಲಂ 32(1), 38(ಎ) ಮತ್ತು 43(ಎ) ರಂತೆ ಶಿಕ್ಷಾರ್ಹವಾಗಿರುವುದರಿಂದ ಈ ಬಗ್ಗೆ ಒಂದು ಘೋರ ಮೊಕದ್ದಮೆಯನ್ನು ದಾಖಲಿಸಲಾಗಿದ್ದು, ಪ್ರಕರಣದಲ್ಲಿ ಅಮೀತ್ ಎ.ಪಿ. ಎಂಬ ಆರೋಪಿಯು ತಲೆಮರೆಸಿಕೊಂಡಿದ್ದು ತನಿಖೆಯಲ್ಲಿ ಪತ್ತೆಹಚ್ಚಬೇಕಾಗಿರುತ್ತದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page