September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಿಟ್ಟೆಯಲ್ಲಿ ಡೆವ್ ರೆವ್ ಕಂಪೆನಿ ಸಹಯೋಗದೊಂದಿಗೆ ನಡೆದ ಮಹಿಳಾ ಎಐ ಹ್ಯಾಕಥಾನ್ ಓರಿಯಂಟೇಶನ್

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನವಂಬರ್ 21ರಿಂದ ವಿದ್ಯಾರ್ಥಿನಿಯರಿಗಾಗಿ ಡೆವ್ ರೆವ್ ಹಾಗೂ ಜಿಆರ್-ಎಐ-ಸಿಇ ಕಂಪೆನಿ ಆಯೋಜಿಸಿದ 2 ವಾರಗಳ ಮಹಿಳಾ ಎಐ ಹ್ಯಾಕಥಾನ್ ಈವೆಂಟ್ ನ ಓರಿಯಂಟೇಶನ್ ಮತ್ತು ಇಂಡಕ್ಷನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜು, ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಎಂಜಿನಿಯರಿಂಗ್ ಮತ್ತು ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡೆವ್ ರೆವ್ ನ 12 ಮಂದಿ ನುರಿತ ತರಬೇತುದಾರರ ತಂಡವು ನಿಟ್ಟೆ ಕ್ಯಾಂಪಸ್ ಗೆ ಬಂದು ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಓರಿಯಂಟ್ ಮಾಡುವ ಮೂಲಕ ಮತ್ತು ಭಾಗವಹಿಸುವವರಿಗೆ ಪ್ರಾಬ್ಲೆಮ್ ಸ್ಟೇಟ್ಮೆಂಟ್ ನೀಡುವ ಮೂಲಕ ಹ್ಯಾಕಥಾನ್ ಗೆ ಚಾಲನೆ ನೀಡಿದರು. ಹ್ಯಾಕಥಾನ್ ನ ವಿಜೇತರನ್ನು ಡಿಸೆಂಬರ್ ನಲ್ಲಿ ಘೋಷಿಸಲಾಗುವುದು ಮತ್ತು ವಿಜೇತರು ಆಕರ್ಷಕ ನಗದು ಬಹುಮಾನಗಳನ್ನು ಮತ್ತು ಡೆವ್ ರೆವ್ ಅವರೊಂದಿಗೆ ಇಂಟರ್ನ್ ಶಿಪ್ ಗೆ ಅವಕಾಶವನ್ನು ಪಡೆಯುತ್ತಾರೆ. ಕೌನ್ಸೆಲಿಂಗ್, ವೆಲ್ಫೇರ್, ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥ ಭರತ್ ಜಿ. ಕುಮಾರ್ ಅವರು ಡೆವ್ ರೆವ್ ತಂಡವನ್ನು ಸ್ಪರ್ಧಿಗಳಿಗೆ ಪರಿಚಯಿಸಿ ಸ್ವಾಗತಿಸಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಹ್ಯಾಕರ್ ಅರ್ತ್ ಕ್ಲಬ್ ಕಾರ್ಯಕ್ರಮವನ್ನು ಆಯೋಜಿಸಿತ್ತು.

You may also like

News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ
News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.

You cannot copy content of this page