May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಂಬೆ ದೇವಸ್ಥಾನ ಕಳವು ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಮೂವರು ಕುಖ್ಯಾತ ಕಳ್ಳರ ಬಂಧನ – ಲಕ್ಷಾಂತರ ಮೌಲ್ಯದ ಆಭರಣ, ಕಾರು ವಶಕ್ಕೆ

ಬಂಟ್ವಾಳ : ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಕುಖ್ಯಾತ ಕಳ್ಳರನ್ನು ಬಂಧಿಸಿ ಕಳವುಗೈದ ಸೊತ್ತು ಹಾಗೂ ಕಾರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ, ಚೆರ್ವತ್ತೂರು ಗ್ರಾಮದ ಕೋತಂಕರ – ಪಿಲಾವಲಪ್ಪು ನಿವಾಸಿ 44 ವರ್ಷ ಪ್ರಾಯದ ಬಶೀರ್ ಕೆ.ಪಿ. ಯಾನೆ ಆಕ್ರಿ ಬಶೀರ್, ಕೊಲ್ಲಂ ಜಿಲ್ಲೆಯ ಕುರುನಾಗಪಲ್ಲಿ ತಾಲೂಕಿನ ಆಲಪ್ಪಾಡ್ ಗ್ರಾಮದ ನಿವಾಸಿ 46 ವರ್ಷ ಪ್ರಾಯದ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಝ್ ಹಾಗೂ ಬಂಟ್ವಾಳ ತಾಲೂಕು, ಪುದು ಗ್ರಾಮದ ನಿವಾಸಿ 53 ವರ್ಷ ಪ್ರಾಯದ ಎಫ್.ಜೆ. ಮಹಮ್ಮದ್ ಇಸ್ಮಾಯಿಲ್ ಎಂದು ಹೆಸರಿಸಲಾಗಿದೆ.

ಆರೋಪಿಗಳು ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 4ರಂದು ರಾತ್ರಿ ಬೆಳ್ಳಿಯ ಆಭರಣಗಳನ್ನು ಹಾಗೂ ನಗದನ್ನು ಕಳವುಗೈದು ಪರಾರಿಯಾಗಿದ್ದರು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಬಂಟ್ವಾಳ ತಾಲೂಕಿನ ಇರಾ ಎಂಬಲ್ಲಿ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1.25 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿಯ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಬಶೀರ್ ಕೆ.ಪಿ. ಎಂಬಾತ ಕುಖ್ಯಾತ ಕಳ್ಳನಾಗಿದ್ದು, ಈತನ ವಿರುದ್ದ ಬೇರೆ ಬೇರೆ ಠಾಣೆಗಳಲ್ಲಿ ಸುಮಾರು 13 ಕಳ್ಳತನ ಪ್ರಕರಣಗಳು ದಾಖಲಾಗಿವೆ. ಆರೋಪಿ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಝ್ ಎಂಬಾತನ ವಿರುದ್ದ 3 ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧನ ಕಾರ್ಯಾಚರಣೆಯು ಜಿಲ್ಲಾ ಎಸ್ಪಿ ಯತೀಶ್ ಎನ್. ಹಾಗೂ ಎಡಿಶನಲ್ ಎಸ್ಪಿ ರಾಜೇಂದ್ರ ಡಿ.ಎಸ್. ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಡಿವೈಎಸ್ಪಿ ಎಸ್. ವಿಜಯಪ್ರಸಾದ್ ಅವರ ನೇತೃತ್ವದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ ಬಿ. ಮತ್ತು ಪೂಂಜಾಲಕಟ್ಟೆ ಠಾಣಾಧಿಕಾರಿ ನಂದಕುಮಾರ್, ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ  ಹರೀಶ್ ಎಂ.ಆರ್., ಲೋಲಾಕ್ಷ ಹಾಗೂ ಸಿಬ್ಬಂದಿಗಳಾದ ಉದಯ ರೈ, ಪ್ರವೀಣ್ ಎಂ., ಅದ್ರಾಮ, ಹರಿಶ್ಚಂದ್ರ, ನಝೀರ್, ಕೃಷ್ಣ ನಾಯ್ಕ್, ಸಂತೋಷ್, ರಾಹುಲ್ ರಾವ್, ಅಶೋಕ್, ವಿವೇಕ್ ಕೆ.,  ಕುಮಾರ್ ಎಚ್.ಕೆ., ಬಸವರಾಜ್, ರಂಜಾನ್, ಕುಮಾರ, ಮಹಾಂತೇಶ್ ಮತ್ತು ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್, ದಿವಾಕರ ಅವರುಗಳ ತಂಡ ನಡೆಸಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page