May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಟೂರಿಸ್ಟ್ ಕಾರು ಚಾಲಕ-ಮಾಲಕರ ಸಂಘದ ಗೌರವಾಧ್ಯಕ್ಷ ಬಿ.ಎಂ. ಪ್ರಭಾಕರ ದೈವಗುಡ್ಡೆ ನಿಧನ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಟೂರಿಸ್ಟ್ ಕಾರು ಚಾಲಕ-ಮಾಲಕರ ಸಂಘದ ಗೌರವಾಧ್ಯಕ್ಷ ಬಿ.ಎಂ. ಪ್ರಭಾಕರ ದೈವಗುಡ್ಡೆ (71) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಬಂಟ್ವಾಳದಲ್ಲಿ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ರಚಿಸಿ ಆ ಮೂಲಕ ತಾಲೂಕಿನಲ್ಲಿ ಜನಪರ ಸಮಸ್ಯೆಗಳ ಬಗ್ಗೆ ಹೋರಾಟ ಸಂಘಟಿಸಿ ಜನಾನುರಾಗಿಯಾಗಿದ್ದ ಹಿರಿಯ ಸಂಘಟಕರಾಗಿದ್ದ ಪ್ರಭಾಕರ ದೈವಗುಡ್ಡೆ ಅವರು ರೈತ ಪರ ಚಳುವಳಿ, ಟೋಲ್ ಗೇಟ್ ಅವ್ಯವಸ್ಥೇಯ ವಿರುದ್ದ ಹೋರಾಟ, ಎತ್ತಿನ ಹೊಳೆ ಯೋಜನೆಯ ವಿರೋಧಿ ಹೋರಾಟಗಳಲ್ಲಿ ಸಕ್ರಿಯರಾಗಿದ್ದ ಇವರು ಸಮಾನ ಮನಸ್ಕರನ್ನು ಒಟ್ಟುಗೂಡಿಸಿ ಹಲವು ಹೋರಾಟಗಳನ್ನು ನಡೆಸಿದ್ದರು.  ಮೃತರು ಪತ್ನಿ, ಪುತ್ರಿ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ತಾಲೂಕಿನ ವಿವಿಧ ಸಂಘಟನೆಗಳ ಪ್ರಮುಖರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page