May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ಘನ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕು ಹಸನಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ :  ಕರ್ನಾಟಕ ಘನ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕು ಹಸನಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.  ಅವರು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಅನಂತಾಡಿ, ಪೆರಾಜೆ, ನೆಟ್ಲಮೂಡ್ನೂರು, ಮಾಣಿ, ಕಡೇಶಿವಾಲಯ, ಕೆದಿಲ, ಪೆರ್ನೆ ಗ್ರಾಮಗಳನ್ನೊಳಗೊಂಡು ಗ್ಯಾರಂಟಿ ಯೋಜನೆಗಳ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು‌ ಉದ್ಘಾಟಿಸಿ ಮಾತನಾಡಿದರು.

ಭಾರತ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಆರ್ಥಿಕ ಸಬಲೀಕರಣಕ್ಕಾಗಿ ಸಮಗ್ರ ಬದಲಾವಣೆಯನ್ನು ಮಾಡಿ ವಿಶ್ವವೇ ಗುರುತಿಸುವಂತಾಗಿತ್ತು. ಈಗ ಕರ್ನಾಟಕದಲ್ಲಿ ಸನ್ಮಾನ್ಯ ಸಿದ್ದರಾಮಯ್ಯರವರು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನಸಾಮಾನ್ಯರ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ್,  ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ,  ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ಸದಸ್ಯರಾದ ಮಹಮ್ಮದ್ ಸಿರಾಜ್, ಐಡಾ ಸುರೇಶ್, ಕಾಂಚಲಾಕ್ಷಿ, ಸತೀಶ್, ಚಂದ್ರಶೇಖರ ಆಚಾರ್ಯ, ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಎಂ. ಪೆರಾಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಶರ್ಮ, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಪೂಜಾರಿ, ಮಾಜಿ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ರಮಣಿ ಡಿ. ಪೂಜಾರಿ, ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಪೂಜಾರಿ ಕೊಪ್ಪರಿಗೆ, ಅನಂತಾಡಿ ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲ, ನೇರಳಕಟ್ಟೆ ಸಿ.ಎ. ಬೇಂಕ್, ನಿರ್ದೇಶಕ ಕೆ. ನಿರಂಜನ್ ರೈ, ನಾರಾಯಣ್ ಸಾಲ್ಯಾನ್ ಅನಂತಾಡಿ, ಅಶೋಕ್ ಕುಮಾರ್ ಬರಿಮಾರು  ಮೊದಲಾದವರು ಭಾಗವಹಿಸಿದ್ದರು. ಇದೇ ವೇಳೆ ಸಂವಿಧಾನದ ದಿನದ ಅಂಗವಾಗಿ ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೆಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಲಾಯಿತು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಜಿ ಅದ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page