May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇಶದ ಅತ್ಯಂತ ಕಿರಿಯ ಪೈಲಟ್ ಆದ ಕೀರ್ತಿ ವಿಜಯಪುರದ ಸಮೈರಾ ಮಡಲಿಗೆ

ಗುಮ್ಮಟಿ ನಗರಿ ವಿಜಯಪುರ ಜಿಲ್ಲೆಯ ಸಮೈರಾ ಎಂಬ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಆದ ಕೀರ್ತಿ ತನ್ನ ಮಡಿಲಿಗೆ ಗಿಟ್ಟಿಸಿಕೊಂಡು ವಿಜಯಪುರ ಹಾಗೂ ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ.

ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಹೆಚ್ಚು ಪ್ರಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆಗೈದವರಿದ್ದಾರೆ. ಇದೀಗ ಮತ್ತೊಂದು ಸಾಧನೆಯಿಂದ ಜಿಲ್ಲೆಯ ಹಾಗೂ ರಾಜ್ಯದ ಹಿರಿಮೆ ಹೆಚ್ಚಿದೆ. 18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಇತಿಹಾಸ ಸೃಷ್ಟಿಸಿರುವ ಸಮೈರಾ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.

ತಮ್ಮ ಶಿಕ್ಷಣವನ್ನು ವಿಜಯಪುರದಲ್ಲಿ ಮುಗಿಸಿ, ಆರು ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ. ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹೆಣ್ಣು ಮಕ್ಕಳನ್ನು ಕಡೆಗಣಿಸುವ ಜನರಿಗೆ ಸಮೈರಾ ಕುಟುಂಬ ಮಾದರಿ ಆಗಿದೆ. ಜೊತೆಗೆ ಇಂದಿನ ಕಾಲದ ಯುವ ಪೀಳಿಗೆಗೆ ಸಮೈರಾ ಇವರ ಸಾಧನೆ ಪ್ರೇರಣೆ ಆಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page