September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಜನರಿಂದ ನಾನು ಮೇಲೆ ಬಂದೆ” ಎಂದ – ನಿರ್ದೇಶಕ ನವಿಲುಗರಿ ನವೀನ್ ಪಿ.ಬಿ.

ಇತ್ತೀಚಿಗೆ ಬಿಡುಗೆಗೊಂಡ ಲೆಜೆಂಡ್ ಡೈರೆಕ್ಟರ್ ಸಿನಿಮಾ ಗೆಲುವಿನ ಒಂದು ತಿಂಗಳ ಸಂಭ್ರಮಾಚರಣೆಯನ್ನು ಆಚರಿಸಿಕೊಂಡಿತ್ತು. ಈ ಸಮಾರಂಭದಲ್ಲಿ ಲೆಜೆಂಡ್ ಡೈರೆಕ್ಟರ್ ಸಿನಿಮಾಗಾಗಿ ದುಡಿದ ಕಲಾವಿದರಿಗೆ, ತಾಂತ್ರಿಕ ವರ್ಗದವರಿಗೆ ಹಾಗೂ ಸಿನಿಮಾ ಗೆಲುವಿಗೆ ಕಾರಣೀಭೂತರಾದ ಅಭಿಮಾನಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. ಇದೇ ಸಂತೋಷದ ಸಮಯದಲ್ಲಿ ಹ್ಯಾಟ್ರಿಕ್ ವರ್ಲ್ಡ್ ರೆಕಾರ್ಡ್ ಹೋಲ್ಡರ್ ಆದ ನಟ, ನಿರ್ದೇಶಕ ನವಿಲುಗರಿ ನವೀನ್ ಪಿ.ಬಿ. ಇವರ ನೂತನ ಚಿತ್ರ “ಜನರಿಂದ ನಾನು ಮೇಲೆ ಬಂದೆ”  ಎಂಬ  ಟೈಟಲ್ ಕೂಡ ಅನಾವರಣಗೊಂಡಿತ್ತು.

ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಅಧ್ಯಕ್ಷರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರು, ವಿತರಕರು ಹಾಗೂ ಪ್ರದರ್ಶಕರಾದ ಎಸ್.ಎ. ಚಿನ್ನೇಗೌಡರು, ಶೈಲಜಾ ದ್ವಾರಕೀಶ್, ದೇವರಾಜ್ ಗೌಡ, ಗಂಡಸಿ ಸದಾನಂದ ಸ್ವಾಮಿ, ಸತ್ಯಜಿತ್, ರಮಣ ಕಣಗಾಲ್, ಶಿವಕುಮಾರ್ ಆರಾಧ್ಯ, ಸಂದೀಪ್ ಮಾಲನಿ, ಶಿವಣ್ಣ, ಗಂಧರ್ವ ರಾಜ್, ವಿಶಾಲ ಸತೀಶ್ ಹಾಗೂ ಪ್ರಣವ್ ಸತೀಶ್  ಉಪಸ್ಥಿತರಿದ್ದರು.

ಜನರಿಂದ ನಾನು ಮೇಲೆ ಬಂದೆ ಸಿನಿಮಾದಲ್ಲಿ ಲೆಜೆಂಡ್ ಡೈರೆಕ್ಟರ್ ಸಿನಿಮಾದಲ್ಲಿ ಜನ ಮೆಚ್ಚಿದ ಕುಚುಕು ಜೋಡಿ ಆದ ಗಂಧರ್ವ ರಾಜ್ (ಶಂಕರ) ಮತ್ತು ನವಿಲುಗರಿ ನವೀನ್ ಪಿ.ಬಿ. ಇಬ್ಬರು ನಾಯಕ ನಟರಾಗಿ ಕಾಣಿಸಿಕೊಳ್ಳಲಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶದ ಜವಾದ್ದರಿಯನ್ನು ನವಿಲುಗರಿ ನವೀನ್ ಪಿ.ಬಿ. ಹೊತ್ತುಕೊಂಡಿದ್ದಾರೆ. ಮೊದಲ ಬಾರಿ ನಿರ್ಮಾಪಕರಾಗಿ ಹೇಮಾವತಿ ಅವರು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಅತೀ ಶ್ರೀಘ್ರದಲ್ಲೇ ಚಿತ್ರೀಕರಣ ಶುರುಮಾಡಲಿದ್ದೇವೇ ಎಂದು ಚಿತ್ರದ ನಿರ್ದೇಶಕರು ತಿಳಿಸಿದರು.

You may also like

News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.
News

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ – ಪ್ರಧಾನ ಕಾರ್ಯದರ್ಶಿಯಾಗಿ ಝರೀನಾ ಉಪ್ಪಿನಂಗಡಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ

You cannot copy content of this page