May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಲನಚಿತ್ರ ನಟ ಉಪೇಂದ್ರ  ಬಂಟ್ವಾಳದ ಮೊಡಂಕಾಪು ವನದುರ್ಗ ದೇವಸ್ಥಾನಕ್ಕೆ ಭೇಟಿ

ಬಂಟ್ವಾಳ :  ಬಹುಭಾಷಾ ಚಲನಚಿತ್ರ ನಟ ಉಪೇಂದ್ರ ಅವರು  ಬಂಟ್ವಾಳ ತಾಲೂಕಿನ ಮೊಡಂಕಾಪು ಬಳಿಯ ವನದುರ್ಗ ದೇವಸ್ಥಾನಕ್ಕೆ ದಶಂಬರ್ 3ರಂದು ಮಂಗಳವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭ ಅವರು ಸ್ವತಃ ನಿರ್ದೇಶಿಸಿ ನಟಿಸಿರುವ ಹೊಸ ಚಲನಚಿತ್ರ ‘ಯುಐ’ ಯಶಸ್ವಿಯಾಗಲೆಂದು ವನದುರ್ಗಾ ಕ್ಷೇತ್ರದಲ್ಲಿ ಸರ್ವಾಂಲಂಕಾರ ಸೇವೆ ಸಲ್ಲಿಸಿದರು. ಮಧ್ಯಾಹ್ನ ಪೂಜೆ ಬಳಿಕ ಕ್ಷೇತ್ರದಲ್ಲಿ ಅನ್ನದಾನ ಪ್ರಸಾದ ಪಡೆದು ಮಂಗಳೂರಿಗೆ ಪ್ರಯಾಣ ಬೆಳೆಸಿದರು. ಚಲನಚಿತ್ರ ನಿರ್ಮಾಪಕ ಶ್ರೀಕಾಂತ್, ಸಂಗೀತ ನಿರ್ದೇಶಕ ವೇಲುಹರಿ, ನವೀನ್ ಮನೋಹರ್ ಅವರ ಜೊತೆಗಿದ್ದರು. ಮೊಡಂಕಾಪು ವನದುರ್ಗ ಕ್ಷೇತ್ರದ ಗುರುದತ್ ಶೆಣೈ, ಪಾಂಡುರಂಗ ಶೆಣೈ ಉಪಸ್ಥಿತರಿದ್ದರು. ಮೊಡಂಕಾಪು ಕ್ಷೇತ್ರದಲ್ಲಿರುವ ವಿಶೇಷ ಕರೆಯ ಬಗ್ಗೆ ರಾಜೇಶ್ ಭಟ್ ಮಾಹಿತಿ ನೀಡಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page