May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಶಾಸಕರಿಂದ ಅರ್ಹ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳ ವಿತರಣೆ

ಬಂಟ್ವಾಳ : ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರವು ವಿವಿಧ ಸಲಕರಣೆಗಳನ್ನು ನೀಡುತ್ತಿದ್ದು, ಅದನ್ನು ಪಡೆದುಕೊಂಡವರು ತಮ್ಮ ಆದಾಯಕ್ಕೆ ಪೂರಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.

ಅವರು ಶಾಸಕರ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

ಪ್ರಸ್ತುತ ಅರ್ಜಿ ಹಾಕಿರುವ 126 ಮಂದಿಯ ಪೈಕಿ ಸರಕಾರದ ಗುರಿಯಂತೆ 36 ಮಂದಿಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಟೈಲರಿಂಗ್ ಯಂತ್ರ ನೀಡಲಾಗಿದ್ದು, ಮುಂದೆ ಮತ್ತೆ ಯಂತ್ರ ಮಂಜೂರಾದಾಗ ಉಳಿದ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್ ಹೇಳಿದರು.

ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ 318 ಮಂದಿ ಮೇಸ್ತ್ರಿಗಳಿಗೆ ಕಿಟ್, 101 ಮಂದಿ ವೆಲ್ಡರ್‌ಗಳಿಗೆ ಕಿಟ್ ಹಾಗೂ 63 ಮಂದಿ ಎಲೆಕ್ಟ್ರೀಷಿಯನ್ ಗಳಿಗೆ ಸೇರಿ ಒಟ್ಟು 482 ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ 36 ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.

ಬಂಟ್ವಾಳ ಕಾರ್ಮಿಕ ನಿರೀಕ್ಷಕಿ ಲವಿನಾ ಡಿಸೋಜ, ಕಚೇರಿ ಸಹಾಯಕರಾದ ಶಶಿಧರ ಹಾಗೂ ಮುರಳಿ ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page