July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಕನ್ನಡ ಭವನ ಕಾಸರಗೋಡಿನ” ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ರೇಖಾ ಸುದೇಶ್ ರಾವ್ ಆಯ್ಕೆ

ಕಾಸರಗೋಡು: ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾನ್ನಾಗಿ ಸಂಘಟಕಿ, ಲೇಖಕಿ, ಕವಯತ್ರಿ ರೇಖಾ ಸುದೇಶ್ ರಾವ್ ಇವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಭವನದ “ರಜತ ಸಂಭ್ರಮ” ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ, ಪುಸ್ತಕ ಸತ್ಯ – ಪುಸ್ತಕ ನಿತ್ಯ,” ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು ಕಾಸರಗೋಡು ಕನ್ನಡ ಭವನದ ನಿರ್ದೇಶಕ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದ್ದು ಕನ್ನಡ ಭವನದ ಗೌರವ ಅಧ್ಯಕ್ಷ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು.

ಸರ್ವಾನುಮತದಿಂದ ಆಯ್ಕೆಯಾದ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ “ರಜತ ಸಂಭ್ರಮ 2025” ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ   ನಿರ್ವಹಿಸ ಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕೋಶಧಿಕಾರಿ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page