September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಕನ್ನಡ ಭವನ ಕಾಸರಗೋಡಿನ” ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ರೇಖಾ ಸುದೇಶ್ ರಾವ್ ಆಯ್ಕೆ

ಕಾಸರಗೋಡು: ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾನ್ನಾಗಿ ಸಂಘಟಕಿ, ಲೇಖಕಿ, ಕವಯತ್ರಿ ರೇಖಾ ಸುದೇಶ್ ರಾವ್ ಇವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಭವನದ “ರಜತ ಸಂಭ್ರಮ” ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ, ಪುಸ್ತಕ ಸತ್ಯ – ಪುಸ್ತಕ ನಿತ್ಯ,” ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು ಕಾಸರಗೋಡು ಕನ್ನಡ ಭವನದ ನಿರ್ದೇಶಕ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದ್ದು ಕನ್ನಡ ಭವನದ ಗೌರವ ಅಧ್ಯಕ್ಷ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು.

ಸರ್ವಾನುಮತದಿಂದ ಆಯ್ಕೆಯಾದ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ “ರಜತ ಸಂಭ್ರಮ 2025” ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ   ನಿರ್ವಹಿಸ ಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕೋಶಧಿಕಾರಿ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page